ಪ್ರತಿಭಾ ಪುರಸ್ಕಾರ ಪಡೆದ ಪ್ರಾರ್ಥನಾ ಅಕ್ಷಯ ಕುಲಕರ್ಣಿಯನ್ನು ಸನ್ಮಾನಿಸಿ ಗೌರವಿಸಿದ ಬಿಜೆಪಿ ಮುಖಂಡರು

ವಿಜಯಪುರ: ಹಿರಿಯ ಪತ್ರಕರ್ತ ಅಕ್ಷಯ ಕುಲಕರ್ಣಿ ಅವರು ಪುತ್ರಿ ಪ್ರಾರ್ಥನಾ ಅಕ್ಷಯ ಕುಲಕರ್ಣಿ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿಯಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಸಭೆ ಸ್ಪೀಕರ್ ಯು. ಟಿ. ಖಾದರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮುಂತಾದವರು ಉಪಸ್ಥಿತರಿದ್ದು ಸಾಧನೆ ಮಾಡಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.

ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಪ್ರಾರ್ಥನಾ ಅಕ್ಷಯ ಕುಲಕರ್ಣಿ ಅವರನ್ನು ಸನ್ಮಾನಿಸಿದರು

ಪ್ರತಿಭಾ ಪುರಸ್ಕಾರ ಪಡೆದ ಪ್ರಾರ್ಥನಾ ಅಕ್ಷಯ ಕುಲಕರ್ಣಿ ಅವರನ್ನು ವಿಜಯಪುರ ಮಹಾನಗರ ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ಬಿಜೆಪಿ ಮುಖಂಡರಾದ ಪ್ರಕಾಶ ಅಕ್ಕಲಕೋಟ ಮತ್ತು ಚಂದ್ರು ಚೌಧರಿ ಅವರು ಕುಲಕರ್ಣಿ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿ ಶುಭ ಕೋರಿದರು.

Leave a Reply

ಹೊಸ ಪೋಸ್ಟ್‌