ಬಬಲೇಶ್ವರದಲ್ಲಿ ಪಿಕೆಪಿಎಸ್ ನೂತನ ಕಟ್ಟಡ ಉದ್ಘಾಟನೆ ಸಮಾರಂಭ

ವಿಜಯಪುರ: ಬಬಲೇಶ್ವರ ಪಟ್ಟಣದ ಶ್ರೀ ಶಾಂತವೀರ ಸರ್ಕಲ್ ಹತ್ತಿರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ಸಮಾರಂಭ ನೆರವೇರಿತು. ಮನಗೂಳಿಯ ಶ್ರೀ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಅವರು ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ರೈತರು ಮತ್ತು ಕಾರ್ಮಿಕರಿಗೆ ಸಹಕಾರಿ ಬ್ಯಾಂಕುಗಳು ಅವಶ್ಯಕವಾಗಿದ್ದು, ಸರಕಾರದ ಸಾಲ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು, ಮರಳಿ ನೀಡುವ ಮೂಲಕ ಈ ಬ್ಯಾಂಕುಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸಹಕಾರಿ ಧುರೀಣ […]

ಶರಣರ ವಚನ ಸಾಹಿತ್ಯವನ್ನು ಜಗತ್ತಿಗೆ ಪರಿಚಯಿಸುವಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಕೊಡುಗೆ ಅನನ್ಯ: ಪ್ರಕಾಶ ಬಗಲಿ

ವಿಜಯಪುರ: ಶರಣ ಸಾಹಿತ್ಯವನ್ನು ಜಗತ್ತಿಗೆ  ಪರಿಚಯಿಸುವಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಕೊಡುಗೆ ಅನನ್ಯ ಎಂದು ನಗರದ ಪ್ರತಿಷ್ಠತಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಪ್ರಕಾಶ ಎಸ್. ಬಗಲಿ ಹೇಳಿದ್ದಾರೆ. ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಡಾ. ಫ. ಗು. ಹಳಕಟ್ಟೀಯವರ 143ನೇ ಜನ್ಮದಿನದ ಅಂಗವಾಗಿ ವಿಜಯಪುರ ಪ್ರಿಂಟಿಂಗ್ ಪ್ರೆಸ್ ಮತ್ತು ವರ್ಕರ್ಸ್ ಅಸೋಶಿಯೇಷನ್ ಆಯೋಜಿಸಿದ್ದ ಮುದ್ರಣ ಸಾಧಕರಿಗೆ ಮುದ್ರೋಧ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮುದ್ರಣ ಸಾಧಕರನ್ನು ಗುರುತಿಸಿ […]