ಗ್ರಾಮ ಪಂಚಾಯಿತಿ ಚುನಾವಣೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ ಡಿಸಿ ಟಿ. ಭೂಬಾಲನ

ವಿಜಯಪುರ: ಜಿಲ್ಲೆಯ ನಾನಾ ಗ್ರಾಮ ಪಂಚಾಯಿತಿಗಳಿಗೆ ಜು. 23 ರಂದು ಸಾರ್ವತ್ರಿಕ ಹಾಗೂ ಉಪ ಚುನಾವಣೆ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಟಿ. ಭೂಬಾಲನ ಆದೇಶ ಹೊರಡಿಸಿದ್ದಾರೆ.

ಮತದಾನ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು 144ರನ್ವಯ ಪ್ರತಿಬಂಧಕಾಜ್ಞೆಯನ್ನು ವಿಧಿಸಿರುವ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಟಿ. ಭೂಬಾಲನ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರ, ಬಳಬಟ್ಟಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ಹಾಗೂ ನಾನಾ ಕಾರಣಗಳಿಂದ ತೆರವಾಗಿರುವ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಮತ್ತು ಇಂಡಿ ತಾಲೂಕಿನ ಅಂಜುಟಗಿ ಗ್ರಾಮ ಪಂಚಾಯಿತಿಗಳಿಗೆ ಮತದಾನ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶದಲ್ಲಿ ಜು. 21ರ ಸಂಜೆ 5 ಗಂಟೆಯಿಂದ ಜು. 23ರ ಸಂಜೆ 5 ಗಂಟೆಯವರೆಗೆ ನಿಷೇಧಿತ ಪ್ರದೇಶವೆಂದು ಷರತ್ತುಗಳನ್ನು ವಿಧಿಸಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಟಿ. ಭೂಬಾಲನ ಆದೇಶ ಹೊರಡಿಸಿದ್ದಾರೆ.

Leave a Reply

ಹೊಸ ಪೋಸ್ಟ್‌