ಮಳೆ ಹಿನ್ನೆಲೆ- ಇಂದು ವಿಜಯಪುರ ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ- ಟಿ. ಭೂಬಾಲನ್

ವಿಜಯಪುರ: ಜಿಲ್ಲಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಹಾಗೂ ಖಾಸಗಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ಶುಕ್ರವಾರ ಜುಲೈ-28 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.

ವಿಜಯಪುರ ಜಿಲ್ಲಾಧಿಕಾರಿ‌ ಟಿ. ಭೂಬಾಲನ ಹೊರಡಿಸಿರುವ ಆದೇಶ

ಎಲ್ಲ ಪದವಿ, ಸ್ನಾತಕೋತ್ತರ ಪದವಿ,ಡಿಪ್ಲೋಮಾ, ಇಂಜಿನೀಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೊಷಿಸಿರುವುದಿಲ್ಲ. ಎಂದಿನಂತೆ ತರಗತಿ ನಡೆಯಲಿವೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌