ವೃದ್ಧ ದಂಪತಿಯ ಮನವಿಗೆ ಒಂದೇ ಗಂಟೆಯಲ್ಲಿ ಸ್ಪಂದನೆ- ಡಿಸಿ ಟಿ. ಭೂಬಾಲನ ಮಾಡಿದ ಕೆಲಸ ಇತರರಿಗೆ ಮಾದರಿ

ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಮುಂದೆ ಅಳಲು ತೋಡಿಕೊಂಡು ಬಂದ ಬಡ ವೃದ್ಧ ದಂಪತಿಗಳಿಗೆ ಒಂದು ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ಇತರ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ.  

ವಿಜಯಪುರ ನಗರದ ಗ್ಯಾಂಗಬಾವಡಿಯ ನಿವಾಸಿಗಳಾದ ಸೂರ್ಯಕಾಂತ ರಾಮದುರ್ಗಕರ ಮತ್ತು ಸುರೇಖಾ ರಾಮದುರ್ಗ ಕಡು ಬಡವ ವೃದ್ಧ ದಂಪತಿಯಾಗಿದ್ದು, ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು.  ತಮ್ಮ ಜೀವನೋಪಾಯಕ್ಕೆ ಆಸರೆ ಒದಗಿಸಲು ಮನವಿ ಮಾಡಿಕೊಂಡಿದ್ದರು.  ಜಿಲ್ಲಾಧಿಕಾರಿಗಳು ಅವರ ದೂರನ್ನು ಶಾಂತಚಿತ್ತದಿಂದ ಅಲಿಸಿ, ಸ್ಥಳದಲ್ಲಿಯೇ ವೃದ್ದ ದಂಪತಿಗಳಿಗೆ ಪಿಂಚಣಿ ಮಂಜೂರು ಮಾಡಿ ಕೊಡುವ ಮೂಲಕ ಮುಪ್ಪಾವಸ್ಥೆಯಲ್ಲಿ ವೃದ್ಧ ದಂಪತಿಗೆ ಅಸರೆಯಾಗಿದ್ದಾರೆ.

ಸರಕಾರದ ಪಿಂಚಣಿ ಸೇರಿದಂತೆ ನಾನಾ ಯೋಜನೆಗಳ ಸೌಲಭ್ಯಕ್ಕಾಗಿ ಜಿಲ್ಲೆಯ ಯಾವುದೇ ಫಲಾನುಭವಿಗಳು ಕಚೇರಿಗಳಿಗೆ ಅಲೆದಾಡುವಂತಾಗಬಾರದು.  ಈ ನಿಟ್ಟಿನಲ್ಲಿ ಸೂಕ್ತ ಕೈಗೊಂಡು ಅರ್ಹ ಫಲಾನುಭವಿಗಳಿಗೆ ಮತ್ತು ಅವಶ್ಯಕತೆ ಇರುವವರಿಗೆ ಸರಕಾರದ ಸೌಲಭ್ಯಗಳು ದೊರಕಿಸಲು ಕ್ರಮ ಕೈಗೊಳ್ಳುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.  ನಾನಾ ಪಿಂಚಣಿ ಯೋಜನೆಗಳಾಗಿ ಅರ್ಹರು ತಾಲೂಕಾ ತಹಸೀಲ್ದಾರರನ್ನು ಸಂಪರ್ಕಿಸಬೇಕು.  ಜಿಲ್ಲೆಯಾದ್ಯಂತ ಪಿಂಚಣಿ ಅದಾಲತ್‍ಗಳನ್ನು ಆಯೋಜಿಸುವ ಮೂಲಕ ಅರ್ಹರಿಗೆ ಸೌಲಭ್ಯ ದೊರಕಿಸಲು ಪ್ರಯತ್ನಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌