ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಸಂಶೋಧನೆ ಕೈಗೊಳ್ಳಿ- ಪ್ರೊ. ಬಿ. ಕೆ. ತುಳಸಿಮಾಲ

ವಿಜಯಪುರ: ಸಂಶೋಧನಾ ವಿದ್ಯಾರ್ಥಿನಿಯರು ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಸಂಶೋಧನೆಯನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ ಹೇಳಿದರು.

ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಘಟಕದ ವತಿಯಿಂದ ಆಯೋಜಿಸಲಾದ ಸಂಶೋಧನೆ ವಿದ್ಯಾರ್ಥಿನಿಯರಿಗೆ ಲ್ಯಾಪ್-ಟಾಪ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲ್ಯಾಪಟಾಪ್‍ಗಳ ಸದುಪಯೋಗವನ್ನು ಸಂಶೋಧನೆಗಷ್ಟೇ ಸೀಮಿತಗೊಳಿಸದೇ ಮಾಹಿತಿ ವಿಶ್ಲೇಷಣೆಗಳನ್ನು ಮಾಡಿ ಆ ಮೂಲಕ ಆರ್ಥಿಕವಾಗಿ ಸದೃಢರಾಗಬಹು ಎಂದು ಅವರು ಸಲಹೆ ನೀಡಿದರು.

ಈ ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ವಿವಿಯ ಕುಲಸಚಿವ ಎಸ್. ಎಸ್. ಸೋಮನಾಳ, ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ವಿವಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಘಟಕದ ನಿರ್ದೇಶಕಿ ಪ್ರೊ. ಲಕ್ಷ್ಮಿದೇವಿ ವೈ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಶಿಕ್ಷಣ ಅಧ್ಯಯನ ವಿಭಾಗದ ಸಂಶೋಧನೆ ವಿದ್ಯಾರ್ಥಿನಿ ಸರಸ್ವತಿ ಬೆಳ್ಳುಂಡಗಿ ಪರಿಚಯಿಸಿದರು.  ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಸಂಶೋಧನೆ ವಿದ್ಯಾರ್ಥಿನಿ ಸುಮಾ ತಡವಳಕರ ವಂದಿಸಿದರು.  ಮಹಿಳಾ ಅಧ್ಯಯನ ವಿಭಾಗದ ಸಂಶೋಧನೆ ವಿದ್ಯಾರ್ಥಿನಿ ತೇಜಸ್ವಿನಿ ಚಾಂದಕವಟೆ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌