ವಿಜಯಪುರ ನಗರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಚಿಂತನೆ- ಪ್ರಸ್ತಾವನೆ ಸಿದ್ಧಪಡಿಸಲು ಸಚಿವ ಎಂ. ಬಿ. ಪಾಟೀಲ ಸೂಚನೆ

ವಿಜಯಪುರ: ವಿಜಯಪುರ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಫ್ಲೈ ಓವರ್ ನಿರ್ಮಾಣದ ಚಿಂತನೆ ನಡೆಯುತ್ತಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಮುಗಿಸಲು ಕ್ರಮ ಕೈಗೊಳ್ಳುವುದು ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ದಿನಿವಿಡೀ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದ ಅವರು, ಇದೇ ವೇಳೆ ತಮ್ಮನ್ನು […]

ಮಕ್ಕಳ ಉಚಿತ ಲಸಿಕಾ ಅಭಿಯಾನ: ಜಿಲ್ಲಾದ್ಯಂತ ಪರಿಣಾಮಕಾರಿ ಅನುಷ್ಠಾನಕ್ಕೆ ಡಿಸಿ ಟಿ. ಭೂಬಾಲನ ಸೂಚನೆ

ವಿಜಯಪುರ:  ಲಸಿಕೆಯಿಂದ ವಂಚಿತರಾಗಿರುವ ಹಾಗೂ ಲಸಿಕೆ ಪಡೆಯದೇ ಇರುವ ಹಾಗೂ ನಿರ್ಲಕ್ಷತನದಿಂದ ಕೈಬಿಟ್ಟು ಹೋಗಿರುವ ನಗರ ಹಾಗೂ ಗ್ರಾಮೀಣ ಭಾಗದ ಗರ್ಭಿಣಿಯರು ಹಾಗೂ ಮಕ್ಕಳನ್ನು ಗುರತಿಸಿ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಉಚಿತ ಲಸಿಕಾ ಅಭಿಯಾನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಹಾಗೂ ಅಂಗನವಾಡಿ ಕೇಂದ್ರಗಳ ಆಶಾ ಕಾರ್ಯಕರ್ತೆಯರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮಿಷನ್ ಇಂದ್ರ ಧನುಷ (IMI-5.0) ಎರಡನೇ ಸುತ್ತಿನ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ನಾನಾ ಇಲಾಖೆಗಳನ್ನು […]