ಬಸವನಾಡಿನ ಶಾಸಕರೊಂದಿಗೆ ಸಿಎಂ ಸಭೆ- ಜಿಲ್ಲೆಯ ಸಚಿವರು, ಶಾಸಕರು ಭಾಗಿ

ಬೆಂಗಳೂರು: ವಿಜಯಪುರ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಜೊತೆಗೆ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. 

ಸಚಿವರು ಮತ್ತು ಶಾಸಕರ ಕ್ಷೇತ್ರಗಳ ಅಭಿವೃದ್ಧಿ, ಅನುದಾನ ಹಂಚಿಕೆ ಮತ್ತು ಲೋಕಸಭೆ ಚುನಾವಣೆ ಸಿದ್ದತೆ ಕುರಿತು ಚರ್ಚಿಸಿದರು.

ಬೆಂಗಳೂರಿನಲ್ಲಿ ಸಿಎಂ, ಡಿಸಿಎಂ ವಿಜಯಪುರ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದರು

ಈ ಸಂದರ್ಭದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಸಕ್ಕರೆ ಮತ್ತು ಎಂಪಿಎಸಿ ಸಚಿವ ಶಿವಾನಂದ ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ, ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ವಿಧಾನ ಪರಿಷತ ಸದಸ್ಯ ಪ್ರಕಾಶ ರಾಠೋಡ ಮತ್ತು ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌