ಬವಸ ನಾಡಿನಲ್ಲಿ ಇನ್ನು ಮುಂದೆ ಮೀಟ್ ಯುವರ್ ಮಿನಿಸ್ಟರ್ ಕ್ರಾರ್ಯಕ್ರಮ

ವಿಜಯಪುರ: ಜಿಲ್ಲೆಯ ಜನತೆಯ ಅಹವಾಲು ಆಲಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದಾರೆ.

ಜಲನಾಯಕ ಎಂ. ಬಿ. ಪಾಟೀಲ ಅವರು ಸಾರ್ವಜನಿಕರ ಸಮಸ್ಯೆ ಆಲಿಸಲು ಈಗ ಹೊಸದೊಂದು ಯೋಜನೆ ರೂಪಿಸಿದ್ದು, ಅದರಂತೆ ಈಗ ಜಿಲ್ಲೆಯ ಜನತೆಗಾಗಿ ಪ್ರತಿ ತಿಂಗಳು ಜಿಲ್ಲಾ ಮಟ್ಟದ ನಿಮ್ಮ ಮಂತ್ರಿ ಭೇಟಿ ಮಾಡಿ(ಮೀಟ್ ಯುವರ್ ಮಿನಿಸ್ಟರ್) ಕಾರ್ಯಕ್ರಮ ನಡೆಸಲಿದ್ದಾರೆ.

ವಿಜಯಪುರ ಜಿಲ್ಲೆಯ ಜನತೆಗಾಗಿ ವಿಶೇಷ ಜಿಲ್ಲಾ ಮಟ್ಟದ ಈ ವಿಶೇಷ  ಕಾರ್ಯಕ್ರಮ ಪ್ರತಿ ತಿಂಗಳಿಗೊಮ್ಮೆ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಏರ್ಪಡಿಸಲಾಗುತ್ತಿದೆ.  ಸಚಿವರ ಸೂಚನೆಯ ಮೇರೆಗೆ ಜಿಲ್ಲಾಡಳಿತದಿಂದ ಈ ಕಾರ್ಯಕ್ರಮ ಆಯೋಜಿಸಲಾಗುವುದು. ತಿಂಗಳಿಗೊಮ್ಮೆ ಜಿಲ್ಲೆಯ ಸಾರ್ವಜನಿಕರ ಕುಂದು-ಕೊರತೆ ಹಾಗೂ ಅಭಿವೃದ್ಧಿ ವಿಚಾರವಾಗಿ ತಮ್ಮನ್ನು ಭೇಟಿ ಮಾಡಬಹುದು.  ಕಾರ್ಯಕ್ರಮದ ದಿನಾಂಕ, ಸ್ಥಳ ಹಾಗೂ ಸಮಯವನ್ನು ಮುಂಚಿತವಾಗಿ ತಿಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ನೀಡಿರುವ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Leave a Reply

ಹೊಸ ಪೋಸ್ಟ್‌