ದೇವರ ಹಿಪ್ಪರಗಿ ತಾಲೂಕು ಕಚೇರಿಗಳಿಗೆ ಡಿಸಿ ಭೇಟಿ, ಪರಿಶೀಲನೆ- ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಸೂಚನೆ

ವಿಜಯಪುರ: ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ನಾನಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೇವರ ಹಿಪ್ಪರಗಿ ತಾಲೂಕಾ ಕಚೇರಿ, ಪಟ್ಟಣ ಪಂಚಾಯಿತಿ ಕಚೇರಿ, ರೈತ ಸಂಪರ್ಕ ಕೇಂದ್ರ, ಪಟ್ಟಣ ಪಂಚಾಯಿತಿ ಹೊಸ ಕಟ್ಟಡ, ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ಮಿನಿ ವಿಧಾನಸೌಧದ ಸ್ಥಳ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚಾಲ್ತಿಯಲ್ಲಿರುವ ತಾಲೂಕಿನ ನಾನಾ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.  ಪಟ್ಟಣ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ ಅವರು, ತಾಲೂಕಾದ್ಯಂದ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ಮೂಲಕ ಯಾವುದೇ ಸಾರ್ವಜನಿಕರಿಗೆ ತೊಂದರೆಯಾಗದAತೆ ಅವರ ದೂರು-ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು  ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವರ ಹಿಪ್ಪರಗಿ ತಾಲೂಕು ಕಚೇರಿಗೆ ಡಿಸಿ ಟಿ. ಭೂಬಾಲನ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಸಾರ್ವಜನಿಕರ ದೂರುಗಳಿಗೆ ನಿಗದಿತ ಕಾಲಾವಧಿಯಲ್ಲಿ ಪರಿಹಾರ ಒದಗಿಸಬೇಕು. ಸಾರ್ವಜನಿಕರನ್ನು ಪದೇ ಪದೇ ಕಚೇರಿಗೆ ಅಲೆದಾಟ ತಪ್ಪಿಸಿ ಅವರ ದೂರುಗಳನ್ನು ಆಲಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಿಬೇಕು. ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಕಾರ್ಯನಿರ್ವಹಣೆಯಲ್ಲಿ ನ್ಯೂನ್ಯತೆಗಳು ಕಂಡು ಬಂದಲ್ಲಿ ಶೀಘ್ರದಲ್ಲಿ ಸರಿಪಡಿಸಿಕೊಂಡು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರಕಾರದ 5 ಗ್ಯಾರಂಟಿಗಳ ಸದುಪಯೋಗವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅರ್ಹರಿಗೆ ಯೋಜನೆ ಲಾಭ ದೊರಕಿಸಲು ಕಾರ್ಯನಿರ್ವಹಿಸಬೇಕು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವ್ಯತ್ಯವಾಗದಂತೆ ನೋಡಿಕೊಳ್ಳಬೇಕು. ಅನುಷ್ಠಾನ ಕಾರ್ಯದಲ್ಲಿ ಸಾರ್ವಜನಿಕರ ಸಹಕಾರ ಪಡೆದುಕೊಂಡು ಪರಿಣಾಮಕಾರಿಯಾಗಿ ಯೋಜನೆಗಳ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ತಾಲೂಕಾ ಕಚೇರಿಗಾಗಿ ಹೊಸದಾಗಿ ಜಾಗೆ ಗುರುತಿಸುವ ಕಾರ್ಯ ನಡೆದಿದೆ. ಈಗಾಗಲೇ ಒಂದರೆಡು ಸ್ಥಳ ಗುರುತಿಸಲಾಗಿದೆ. ಸಾರ್ವಜನಿಕರ ಅನುಕೂಲ ಗಮನದಲ್ಲಿಟ್ಟುಕೊಂಡು ಸೂಕ್ತ ಜಾಗ ಗುರುತಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

 

ಈ ಸಂದರ್ಭದಲ್ಲಿ ದೇವರ ಹಿಪ್ಪರಗಿ ತಹಸೀಲ್ದಾರ ಪ್ರಕಾಶ, ಶಿರಸ್ತೇದಾರ ಎಂ.ಕೆ.ದೇಸಾಯಿ, ಕೃಷಿ ಇಲಾಖೆ ಅಧಿಕಾರಿಗಳು,  ಸೇರಿದಂತೆ ತಾಲೂಕಾ ಮಟ್ಟದ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌