ಸಿಂದಗಿ ತಾಲೂಕು ಕಚೇರಿಗಳಿಗೆ ಭೇಟಿ ಟಿ. ಭೂಬಾಲನ ಭೇಟಿ, ಪರಿಶೀಲನೆ- ತಾಲೂಕಾದ್ಯಂತ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಸೂಚನೆ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಸಿಂದಗಿ ತಾಲೂಕಿನ ನಾನಾ ಕಚೇರಿಗಳಿಗೆ ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಸಿಂದಗಿ ತಾಲೂಕಿನ ನಾನಾ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತಾಲೂಕಿನಾದ್ಯಂತ ಕುಡಿಯುವ ನೀರಿನ ತೊಂದರೆಯಾಗದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಸಿಂದಗಿ ತಾಲೂಕು ಕಚೇರಿಕೆ ಡಿಸಿ ಟಿ. ಭೂಬಾಲನ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಸಿಂದಗಿ ನೂತನ ತಾಲೂಕು ಆಡಳಿತ ಸೌಧ ಕಟ್ಟಡದ ಸ್ಥಳ ಪರಿಶೀಲನೆ ನಡೆಸಿದ ಅವರು, ಕಾಮಗಾರಿಗೆ ವೇಗ ನೀಡಿ, ತೀವ್ರಗತಿಯಲ್ಲಿ ಕೈಗೊಂಡು ಅಚ್ಚುಕಟ್ಟಾದ ಕಟ್ಟಡ ನಿರ್ಮಾಣ ಕೈಗೊಳ್ಳುವಂತೆ ತಿಳಿಸಿದರು. ಮೂರು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ, ಸಿಂದಗಿ ತಹಸೀಲ್ದಾರ ಸುರೇಶ ಚವಲರ, ತಾಲೂಕಾ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಬಾಬು ರಾಠೋಡ, ಸೇರಿದಂತೆ ತಾಲೂಕಾ ಮಟ್ಟದ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌