ಮಕ್ಕಳಿಗೆ ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಜಾಗೃತಿ ಪಾಠ- ಮಾಸ್ಟರ್ ಕಿಶನ್, ಧ್ರುವ ಎಂ. ಪಾಟೀಲ ವಿನೂತನ ಪ್ರಯತ್ನ

ವಿಜಯಪುರ: ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದ ಮನುಕುಲದ ಮೇಲಾಗುತ್ತಿರುವ ಗಂಭೀರ ಪರಿಣಾಮಗಳ ಬಗ್ಗೆ ಮಕ್ಕಳಿಗೆ ವಿದ್ಯಾರ್ಥಿ ದಿಸೆಯಿಂದಲೇ ಜಾಗೃತಿ ಮೂಡಿಸಿ ಅವರನ್ನು ಭವಿಷ್ಯದ ಹಸಿರು ಸೈನಿಕ(ಗ್ರೀನ್ ವಾರಿಯರ್ಸ್)ರನ್ನಾಗಿ ಮಾಡುವ ವಿನೂತನ ಮತ್ತು ವಿಶಿಷ್ಠ ಕಾರ್ಯಕ್ರಮವೊಂದು ಬಸವ ನಾಡಿನಲ್ಲಿ ನಡೆಯಿತು.  ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಪಿ.ಪಿ.ಎ(ಸೊಸಾಯಿಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲ್ಯಾಂಟ್ಸ್ ಆ್ಯಂಡ್ ಎನಿಮಲ್ಸ್), ಶಾಲಾ ಶಿಕ್ಷಣ ಇಲಾಖೆ ಮತ್ತು ಅರ್ಜುಣಗಿ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ನಡೆದ […]