ಸದಾಶಿವ ಮೂಲ ಮಹಾಸಂಸ್ಥಾನಮಠದ ಹೆಸರಿನಲ್ಲಿ ಯಾರೂ ದೇಣಿಗೆ ಕೇಳುತ್ತಿಲ್ಲ- ಯಾರಿಗೂ ಹಣ ನೀಡಬೇಡಿ- ಬಬಲಾದಿ ಶ್ರೀ ಸಿದ್ಧರಾಮಯ್ಯ ಮುತ್ಯಾ ಖಡಕ್ ಎಚ್ಚರಿಕೆ

ವಿಜಯಪುರ: ಕಾಲಜ್ಞಾನಕ್ಕೆ ಹೆಸರಾಗಿರುವ ಬಸವ ನಾಡಿನ ಬಬಲಾದಿ ಶ್ರೀ ಗುರು ಚಕ್ರವರ್ತಿ ಸದಾಶಿವ ಮೂಲ ಮಹಾಸಂಸ್ಥಾನ ಮಠದ ಹೆಸರಿನಲ್ಲಿ ಕೆಲವು ಜನರು ದೇಣಿಗೆ ಸಂಗ್ರಹಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಶ್ರೀಗಳ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿ ಪ್ರತಿವರ್ಷ ನಡೆಯುವ ಜಾತ್ರೆಯ ಸಂದರ್ಭದಲ್ಲಿ ಮಠದ ಕಾರ್ಣಿಕ ಶ್ರೀ ಸಿದ್ಧರಾಮಯ್ಯ ಮುತ್ಯಾ ನೀಡುವ ಹೇಳಿಕೆ ಜಗತ್ಪ್ರಸಿದ್ಧವಾಗಿದೆ.  ಇವರು ನುಡಿಯುವ ಭವಿಷ್ಯ ಎಲ್ಲವೂ ನಿಜವಾಗುತ್ತಿದೆ.  ಹೀಗಾಗಿ ಈ ಮಠದ ಮೇಲೆ ಕರ್ನಾಟಕವಷ್ಟೇ ಅಲ್ಲ, ದೇಶದ ನಾನಾ ಭಾಗಗಳಿಂದಲೂ ಭಕ್ತರು ಆಗಮಿಸಿ ದೇವರ ಪ್ರೀತಿಗೆ […]

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಬೇಕು- ಡಾ. ಆರ್. ಎಸ್. ಮುಧೋಳ

ವಿಜಯಪುರ, ಆ. 12: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಗತ್ಯಕ್ಕೆ ತಕ್ಕಂತೆ ಕೌಶಲ್ಯಾಭಿವೃದ್ಧಿ ಮಾಡಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದ್ದಾರೆ. ವಿವಿಯಲ್ಲಿ ಚಿಕ್ಕಮಕ್ಕಳ ವಿಭಾಗದ ಆಶ್ರಯದಲ್ಲಿ ನಡೆದ ಮಕ್ಕಳಲ್ಲಿ ಕಂಡು ಬರುವ ಗಂಭೀರ ಕಾಯಿಲೆಗಳ ನಿರ್ವಹಣೆ ವಿಧಾನದ ಬಗ್ಗೆ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಎರಡು ದಿನಗಳ ವಿಶೇಷ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಲಿಕಾ ಕೌಶಲ್ಯ ತರಬೇತಿ ಕಾರ್ಯಕ್ರಮ ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಪ್ರಮುಖ ಪಾತ್ರ […]

ಬಿಜೆಪಿ ಅವಧಿಯಲ್ಲಿ ಟೆಂಡರ್ ಗಾತ್ರ ಹೆಚ್ಚಿಸಿರುವ ಕುರಿತು ಸಮಗ್ರ ತನಿಖೆಯಾಗಬೇಕು- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಟೆಂಡರ್ ಗಾತ್ರ ಹಚ್ಚಿಸಿರುವ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಅಹಿಂದ ಮತ್ತು ಕಾಂಗ್ರೆಸ್ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ಭಾಗವಾಗಿ ನಾನಾ ಟೆಂಡರ್ ಗಳ ಅಂದಾಜು ವೆಚ್ಚವನ್ನು ಹೆಚ್ಚಿಸಲಾಗಿದೆ.  ಈ ಹೆಚ್ಚಳಕ್ಕೆ ಏನು ಕಾರಣ? ಯಾವ ದರಕ್ಕೆ ಗುತ್ತಿಗೆ ನೀಡಲಾಗಿದೆ? ಸೇರಿದಂತೆ ಎಲ್ಲ ಅಂಶಗಳ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಹೇಳಿದರು. ಬಿಜೆಪಿ […]