ರಾಜ್ಯ ಸರಕಾರದ ಡೇಂಜರ್ ಕೆಲಸದ ಸುದ್ದಿ 2 ದಿನಗಳಲ್ಲಿ ಹೊರಬರಲಿದೆ- ವಿಜಯಪುರದಿಂದ ಖರ್ಗೆ ಸೇರಿದಂತೆ ಯಾರೇ ಸ್ಪರ್ಧಿಸಿದರು ಪರಿಣಾಮ ಬೀರದು- ರಮೇಶ ಜಿಗಜಿಣಗಿ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ಸಿನವರು ಇನ್ನೊಂದು ಡೇಂಜರಸ್ ಕೆಲಸ ಮಾಡುತ್ತಿದ್ದು, ಇನ್ನೆರಡು ದಿನಗಳಲ್ಲಿ ಅದು ಹೊರ ಬೀಳಲಿದೆ ಎಂದು ಲೋಕಸಭೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಜನರಿಗೆ ಪುಕ್ಸಟ್ಟೆ ಹಣ ನೀಡಲು ದಲಿತರ ಕರ್ಯಾಣಕ್ಕಾಗಿ ಮೀಸಲಿಟ್ಟಿದ್ದ ಎಸ್. ಇ. ಪಿ. ಟಿ. ಎಸ್. ಪಿ ಹಣವನ್ನೂ ಕಸಿದುಕೊಂಡಿದ್ದಾರೆ.  ಇವರು ಮಾಡುತ್ತಿರುವ ಡೇಂಜರಸ್ ಕೆಲಸದ ಬಗ್ಗೆ ಇನ್ನೆರಡು ದಿನಗಳಲ್ಲಿ ಎಲ್ಲವೂ ಹೊರ ಬೀಳಲಿದೆ ಎಂದು ಹೇಳಿದರು. ರಾಜ್ಯ […]

ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಂಥಪಾಲಕರ ದಿನ ಆಚಚರಣೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಂಥಾಲಯ ವಿಭಾಗದಿಂದ ಗ್ರಂಥಪಾಲಕರ ದಿನಾಚರಣೆ, ನ್ಯಾಷನಲ್ ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ ಮತ್ತು ಕ್ಲಬ್ ತರಬೇತಿ ಶಿಬಿರ ನಡೆಯಿತು.  ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ಸಸಿಗೆ ನಿರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಾಲೇಜಿನಲ್ಲಿ ಸಾಕಷ್ಟು ಪುಸ್ಸತಕಗಳ ಜೊತೆಗೆ ಡಿಜಿಟಲ್ ಮಾಹಿತಿ ಮತ್ತು ಇ- ರಿಸರ್ಚ್ ಸೌಲಭ್ಯಗಳು ಲಭ್ಯವಿವೆ.  ಇದರ ಸದುಪಯೋಗ […]

ಶ್ರೀ ಹರಳೇಶ್ವರ ಕ್ಷೇತ್ರದಲ್ಲಿ ಗಣದಾಳ ಶ್ರೀಗಳ 11 ದಿನಗಳ ಮೌನಾನುಷ್ಠಾನ ಮುಕ್ತಾಯ

ವಿಜಯಪುರ: ಬಬಲೇಶ್ವರ ತಾಲೂಕಿನ ಶ್ರೀಹರಳೇಶ್ವರ ಸುಕ್ಷೇತ್ರದಲ್ಲಿ ಗುಣದಾಳ ಹಿರೇಮಠದ ಡಾ. ವಿವೇಕಾನಂದ ದೇವರು ಅವರು ಅಧಿಕ ಮಾಸ ಅಂಗವಾಗಿ ಕೈಗೊಂಡಿದ್ದ 11 ದಿನಗಳ ಮೌನ ಅನುಷ್ಠಾನ ಮುಕ್ತಾಯವಾಗಿದೆ. ಈ ಸಮಾರೋಪ ಸಮಾರಂಭದಲ್ಲಿ ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು ಪಾಲ್ಗೋಂಡು ಮಾತನಾಡಿದರು.  ಇಂದಿನ ದಿನಗಳಲ್ಲಿ ಅನುಷ್ಟಾನ ಜಪ- ತಪಗಳು ಕಡಿಮೆಯಾಗಿ ಟಿವಿ, ಮೊಬೈಲ್ ಬಳಕೆ ಹೆಚ್ಚಾಗಿವೆ.  ಮಹಾಭಾರತದಲ್ಲಿ ಗಾಂಧಾರಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಜೀವನ ಮಾಡಿದ ಶಕ್ತಿಯನ್ನು ಮಗ ದುರ್ಯೋಧನನಿಗೆ ಧಾರೆ ಎರೆದ ಪ್ರಸಂಗವನ್ನು ಅವರು ಈ […]

ಕೇಂದ್ರ ಪುರಸ್ಕೃತ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸಿ-ಸಂಸದ ರಮೇಶ ಜಿಗಜಿಣಗಿ ಸೂಚನೆ

ವಿಜಯಪುರ: ಕೇಂದ್ರ ಪುರಸ್ಕೃತ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸುವಂತೆ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2023-24ನೇ ವರ್ಷದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಕೇಂದ್ರ, ರಾಜ್ಯ  ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಜುಲೈ ತಿಂಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ವಿವಿಧ ಇಲಾಖೆಯಡಿ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸುವ ಬೊರವೆಲ್‌ಗಳನ್ನು […]