ದಿ. ಡಿ.ದೇವರಾಜ್ ಅರಸು ಅವರ 108ನೇ ಜನ್ಮ ದಿನಾಚರಣೆ ಸಾಮಾಜಿಕ ಪರಿವರ್ತನೆಯಲ್ಲಿ ಡಿ.ದೇವರಾಜ್ ಅರಸು ಅವರ ಕೊಡುಗೆ ಅಪಾರ- ಟಿ. ಭೂಬಾಲನ್

ವಿಜಯಪುರ: ಹಿಂದುಳಿದ ವರ್ಗಗಳ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಡಿ. ದೇವರಾಜ ಅರಸು ಅವರು ಉಳುವವನೇ ಭೂ ಒಡೆಯ ಎನ್ನುವ ಭೂ ಸುಧಾರಣಾ ಕಾಯಿದೆ ಜಾರಿಗೆ ತರುವ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ […]