ಮೂರು ವರ್ಷಗಳಿಗೊಮ್ಮೆ ನಡೆಯುವ ಉ.ಕ.ದ ಏಕೈಕ ಜೈ ಸಂತೋಷಿ ಮಾತಾ ದೇವಸ್ಥಾನದ ಜಾತ್ರೆಗೆ ಕ್ಷಣಗಣನೆ- ಬುಧವಾರದಿಂದ ಶುಕ್ರವಾರ ನಾನಾ ಕಾರ್ಯಕ್ರಮ

ವಿಜಯಪುರ: ಬಸವನಾಡು ವಿಜಯಪುರ ನಗರದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಅಧಿಕ ಮಾಸ ಶ್ರಾವಣ ತಿಂಗಳಲ್ಲಿ ಮೂರು ದಿನಗಳ ಕಾಲ ನಡೆಯುವ ಜಲನಗರದ ಜೈ ಸಂತೋಷಿ ಮಾತ್ರಾ ಜಾತ್ರೆ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.   ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಾತ್ರಾ ಸಮಿತಿ ಅಧ್ಯಕ್ಷ ಮತ್ತು ಮಹಾನಗರ ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ನಾಳೆ ಆ. 23ರಂದು ಬುಧವಾರದಿಂದ ಆ. 25ರಂದು ಶುಕ್ರವಾರದವರೆಗೆ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು. ಶ್ರೀ ಜೈ ಸಂತೋಷಿಮಾತಾ […]