ಶರಣರ ವಚನಗಳನ್ನು ನಾಟಕ, ನೃತ್ಯರೂಪಕಗಳ ಮೂಲಕ ಪ್ರಸಾರ ಮಾಡುವುದರಿಂದ ಹೆಚ್ಚು ಜನರಿಗೆ ತಲುಪಲು ಸಾಧ್ಯ- ಅಭಿನವ ಸಿದ್ಧಾರೂಢ ಮಹಾಸ್ವಾಮೀಜಿ

ವಿಜಯಪುರ: ಶರಣರ ವಚನಗಳನ್ನು ನಾಟಕ ಮತ್ತು ನೃತ್ಯ ರೂಪಕಗಳ ಮೂಲಕ ಪ್ರಸಾರ ಮಾಡುವುದರಿಂದ ಜೀವನದ ಸಾರವನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಲು ಸಾಧ್ಯ ಎಂದು ಷಣ್ಮುಖಾರೂಢ ಮಠದ ಪೀಠಾಧಿಪತಿ ಅಭಿನವ ಸಿದ್ಧಾರೂಢ ಮಹಾಸ್ವಾಮಿಗಳು ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಪದವಿ ಮಹಾವಿದ್ಯಾಲಯದ ಕನ್ನಡ ಮತ್ತು ಹಿಂದಿ ವಿಭಾಗ, ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರ, ಸಾಣೆಹಳ್ಳಿಯ ಶ್ರೀ ಶಿವಕುಮಾರ ಕಲಾ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ದೇಶದಲ್ಲೇ ಮೊದಲ ಅಖಿಲ […]

ಚಂದ್ರಯಾನ 3 ಯಶಸ್ವಿ- ಬಸವ ಜನ್ಮಭೂಮಿಯಲ್ಲಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಸಂಭ್ರಮಾಚರಣೆ

ವಿಜಯಪುರ: ಭಾರತದ ಬಹುನಿರೀಕ್ಷಿತ ಚಂದ್ರಯಾನ 3 ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬಸವಣ್ಣನವರ ತವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಜವಳಿ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.  ಪರಸ್ಪರ ಸಿಹಿ ಹಂಚಿದ ಕಾರ್ಯಕರ್ತರು ಇಸ್ರೊ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ, ಇಸ್ರೊ ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಯಾಗಿ ಮಾಡುವ ಮೂಲಕ ಕೋಟ್ಯಂತರ ಭಾರತೀಯರ ಜನರ ಕನಸು ನನಸು ಮಾಡಿದ್ದಾರೆ.  ವಿಕ್ರಮ್ […]

ಚಂದ್ರಯಾನ 3 ಯಶಸ್ವಿ- ವಿಜಯಪುರದಲ್ಲಿ ಯುವ ಭಾರತ ಸಮಿತಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ವಿಜಯಪುರ: ಚಂದ್ರನ ಅಂಗಳಕ್ಕೆ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ ತಕ್ಷಣ ಯುವ ಭಾರತ ಸಮಿತಿ ಕಾರ್ಯಕರ್ತರು ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದ ಹತ್ತಿರ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.  ಇಸ್ರೋಗೆ ಜಯವಾಗಲಿ ಎಂಬ ಘೋಷಣೆ ಹಾಕಿದ ಕಾರ್ಯಕರ್ತರು, ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ, ಚಂದ್ರನ ಅಂಗಳಕ್ಕೆ ಯಶಸ್ವಿಯಾಗಿ ತಲುಪಿದ ವಿಕ್ರಂ ಲ್ಯಾಂಡರ್ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂತೋಷದ ಕ್ಷಣಗಳನ್ನು ಕೊಡುಗೆಯಾಗಿ […]

ಚಂದ್ರನ ತಲುಪಿದ ಭಾರತ- ಸಚಿವ ಎಂ. ಬಿ. ಪಾಟೀಲ ಅಭಿನಂದನೆ

ವಿಜಯಪುರ: ಭಾರತದ ಬಹುನಿರೀಕ್ಷಿತ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಕಳುಹಿಸಿದ್ದ ವಿಕ್ರಮ್ ಚಂದ್ರನ ಮೇಲೆ ಸುರಕ್ಷಿತವಾಗಿ ತಲುಪಿದೆ.  ಚಂದ್ರನನ್ನು ತಲುಪಿದ ವಿಶ್ವದ ನಾಲ್ಕನೇ ರಾಷ್ಟ್ವವಾಗಿ ಭಾರತ ಹೊರ ಹೊಮ್ಮಿದ್ದು, ಚಂದ್ರನ ದಕ್ಷಿಣ ದ್ರುವ ತಲುಪಿದ ಮೊದಲ ದೇಶ ಎಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. ಭಾರತದ ಚಂದ್ರಯಾನ 3 ಯಶಸ್ವಿಯಾಗಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೌಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ […]