ಭೂತನಾಳ ಕೆರೆಯ ಬಳಿ ನಿರ್ಮಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಪರಿಶೀಲನೆ ನಡೆಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಮಹಾನಗರ ಪಾಲಿಕೆ ವತಿಯಿಂದ ನಗರದ ಭೂತನಾಳ ಕೆರೆ ಹತ್ತಿರ ಅಭಿವೃದ್ದಿ ಪಡಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭೂತನಾಳ ಕೆರೆ ಪ್ರದೇಶದಲ್ಲಿ ಅಭಿವೃದ್ದಿಪಡಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಅತ್ಯಂತ ಗುಣಮಟ್ಟದ ಕಾಮಗಾರಿ ಕೈಗೊಂಡು, ಅತ್ಯಾಕರ್ಷಕವಾದ ಗಾರ್ಡನ್ ನಿರ್ಮಾಣ ಕಾಮಗಾರಿಯನ್ನು ತೀವ್ರವಾಗಿ ಕೈಗೊಂಡು ಪೂರ್ಣಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ವಿಜಯಪುರ ನಗರದ ಹೊರವಲಯದಲ್ಲಿ ಭೂತನಾಳ ಕೆರೆ ಹತ್ತಿರ ಅಭಿವೃದ್ದಿ ಪಡಿಸಲಾಗುತ್ತಿರುವ ಲೇಕ್ ಫ್ರಂಟ್ ಗಾರ್ಡನ್ ಸ್ಥಳಕ್ಕೆ ಟಿ. ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಭೂತನಾಳ ಕೆರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಶುದ್ಧ ಕುಡಿಯುವ ನೀರು ಪೂರೈಸಬೇಕು. ಯಾವುದೇ ಕಾರಣಕ್ಕೆ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ನಗರ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಅಭಿಯಂತರರಿಗೆ ಸೂಕ್ತ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌