ನೇತ್ರದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಿ- ಡಾ. ಆರ್. ಎಸ್. ಮುಧೋಳ
ವಿಜಯಪುರ: ನೇತ್ರದಾನ ಮಾಡುವ ಮೂಲಕ ಹಲವಾರು ಜನ ಅಂಧರ ಬಾಳಿಗೆ ಬೆಳಕು ನೀಡಬಹುದಾಗಿದೆ. ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ನೇತ್ರಕಸಿ ಮಾಡಲು ಎಲ್ಲ ವ್ಯವಸ್ಥೆಗಳೂ ಲಭ್ಯವಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ನಗರದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ನೇತ್ರಶಾಸ್ತ್ರ ವಿಭಾಗ ಆಯೋಜಿಸಿರುವ ನೇತ್ರದಾನ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […]
ಮಾನ್ವಿ ಡಿಪೋ ಕಂಡಕ್ಟರ್, ಡ್ರೈವರ್ ಮಾನವೀಯತೆ- ಮಹಿಳೆಗೆ ಚಿನ್ನದ ಮಾಂಗಲ್ಯ ಸರ ಮರಳಿಸಿ ಪ್ರಾಮಾಣಿಕತೆ
![](https://basavanadu.com/wp-content/uploads/2023/08/WhatsApp-Image-2023-08-28-at-10.56.02-AM-1024x768.jpeg)
ವಿಜಯಪುರ: ಮಹಿಳಾ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಕಳೆದುಕೊಂಡಿದ್ದ 5 ಗ್ರಾಂ ಚಿನ್ನಾಭರಣವನ್ನು ಮರಳಿಸುವ ಮೂಲಕ ಸರಕಾರಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಮಾನವೀಯತೆ ಮೆರೆದಿದ್ದಾರೆ. ಬೆಳಿಗ್ಗೆ ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ಮಹಿಳೆಗೆ ನಿರ್ವಾಹಕ ಶಿವಾನಂದ ಯಾಳವಾರ ಮತ್ತು ಚಾಲಕ ರಾಮಪ್ಪ ಕುಂದರಗಿ ಅವರು ಮಾಂಗಲ್ಯ ಸರ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಸಹಾಯಕ ಸಂಚಾರ ಅಧೀಕ್ಷಕರು ದೇವೇಂದ್ರ ಡಂಬಳ, ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯ ಸಿಬ್ಬಂದಿ, […]