ವಿಜಯಪುರ ಜಿಲ್ಲಾಡಳಿತದಿಂದ ನಾರಾಯಣ ಗುರುಗಳ ಜಯಂತಿ ಆಚರಣೆ

ವಿಜಯಪುರ: ಮಹಾನ್ ಪುರುಷರ ಆದರ್ಶ, ವ್ಯಕ್ತಿತ್ವ ನಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಇಂತಹ ಜಯಂತಿಗಳು ಮುಖ್ಯ ಹಾಗೂ ಮಹತ್ವದ್ದಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಹೇಳಿದರು. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾರಾಯಣ ಗುರುಗಳ ನಡೆ, ನುಡಿ ಹಾಗೂ ಆಚಾರ, ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ತತ್ವಾದರ್ಶಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕದ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ್ದ […]

ಸೆ. 2 ರಂದು ಸಿಎಂ ಭೇಟಿ ಹಿನ್ನೆಲೆ ಆಲಮಟ್ಟಿ ಜಲಾಷಯಕ್ಕೆ ಡಿಸಿ ಟಿ. ಭೂಬಾಲನ ಭೇಟಿ, ಸಿದ್ಧತೆ ಪರಿಶೀಲನೆ

ವಿಜಯಪುರ: ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇದೇ ಸೆಪ್ಟೆಂಬರ್ 2ರಂದು ಆಲಮಟ್ಟಿಯ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು  ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ ಸ್ಥಳ ಹಾಗೂ ಅಲ್ಲಿನ ಭದ್ರತೆ, ಬಾಗಿನ ಅರ್ಪಿಸುವ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪೂಜಾ ಸ್ಥಳ, ಅಲ್ಲಿ ಹೂವಿನ ಅಲಂಕಾರ, ಶಾಮಿಯಾನ ವ್ಯವಸ್ಥೆ […]