ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕಲಿಸಬೇಕು- ಶ್ರೀ ಸೋಮನಾಥ ಶಿವಾಚಾರ್ಯ

ವಿಜಯಪುರ: ಮಕ್ಕಳಿಗೆ ಶಿಕ್ಷಣದ ಮೌಲ್ಯಯುತ ಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ಕನ್ನೂರ ಶ್ರೀ ಮದ್ ರಂಭಾಪುರಿ ಶಾಖಾ ಗುರುಮಠದ ಸೋಮನಾಥ ಶಿವಾಚಾರ್ಯ ಹೇಳಿದ್ದಾರೆ. ನಗರದ ಸಂಗನಬಸವ ಸಮುದಾಯ ಭವನದಲ್ಲಿ ಜಿ. ಪಂ, ತಾ. ಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ವಿಜಯಪುರ ಗ್ರಾಮೀಣ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ನಡೆದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಕಲ್ಲಿನ […]

ವಿಜಯಪುರ ನೂತನ ಎಸ್ಪಿಯಾಗಿ ಸೋನಾವಣೆ ರಿಷಿಕೇಶ ಭಗವಾನ ವರ್ಗಾವಣೆ

ವಿಜಯಪುರ: ವಿಜಯಪುರ ಜಿಲ್ಲಾ ನೂತನ‌ ಎಸ್ಪಿಯಾಗಿ 2014ರ ಬ್ಯಾಚಿನ‌ ಐಪಿಎಸ್ ಅಧಿಕಾರಿ ಸೋನಾವಣೆ ರಿಷಿಕೇಶ ಭಗವಾನ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ‌ದೆ. ಇಂಟಲಿಜನ್ಸ್ ವಿಭಾಗದ ಎಸ್ಪಿಯಾಗಿದ್ದ ಸೋನಾವಣೆ ರಿಷಿಕೇಶ ಭಗವಾನ ಅವರನ್ನು ರಾಜ್ಯ ಸರಕಾರ ವಿಜಯಪುರ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಿದೆ. ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ವಿಜಯಪುರ ಎಸ್ಪಿಯಾಗಿದ್ದ ಎಚ್. ಡಿ. ಆನಂದಕುಮಾರ ಅವರನ್ನು ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯದ ಎಸ್ಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.