ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ -4ರ ಯೋಜನೆ- ಕಾಮಗಾರಿಗಳ ಪರಿಶೀಲನೆ ನಡಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕೋಲ್ಹಾರ, ಮನಗೂಳಿ ಹಾಗೂ ನಿಡಗುಂದಿ ಪಟ್ಟಣ ಪಂಚಾಯಿತಿ ಮತ್ತು ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಡಿ ಕೈಗೊಂಡಿರುವ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-4ರ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕೋಲ್ಹಾರ, ಮನಗೂಳಿ ಹಾಗೂ ನಿಡಗುಂದಿ ಮತ್ತು ಬಸವನ ಬಾಗೇವಾಡಿಗೆ ಭೇಟಿ ನೀಡಿದ ಅವರು, ಈ ಕಾಮಗಾರಿಯ ಸಿಸಿ ರಸ್ತೆ ಹಾಗೂ ಡಾಂಬರ ರಸ್ತೆಗಳ ಪರಿಶೀಲನೆ ನಡೆಸಿದರು. ಅಂದಾಜು ಪತ್ರಿಕೆಯಂತೆ ಕಾಮಗಾರಿಯ ಅಳತೆ ಹಾಗೂ ಗುಣಮಟ್ಟ ಕಾಪಾಡಿಕೊಂಡು ಕಾರ್ಯ ನಿರ್ವಹಿಸಲು ಅಭಿಯಂತರರು, ಯೋಜನಾ ಸಮಾಲೋಚಕರು ಮತ್ತು ಗುತ್ತಿಗೆದಾರರಿಗೆ ಬಾಕಿ ಇರುವ ಕಾಮಗಾರಿಗಳನ್ನು ಒಂದು ವಾರದೊಳಗಾಗಿ ಆರಂಭಿಸಿ, ಶೀಘ್ರವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ವಿಜಯಪುರ ನಗರದಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ -4ರ ಯೋಜನೆ- ಕಾಮಗಾರಿಗಳನ್ನು ಡಿಸಿ ಟಿ. ಭೂಬಾಲನ್ ಪರಿಶೀಲನೆ ನಡೆಸಿದರು

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಕಾರ್ಯಪಾಲಕ ಅಭಿಯಂತರರ ಎಂ. ಎಲ್. ಪಡಗಾನೂರ, ಸಹಾಯಕ ಕಾರ್ಯಪಾಲಕ ಅಭಿಯಂತರರ ಮುದ್ದಾ, ನಾರಾಯಣಕರ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಗುತ್ತಿಗೆದಾರರು ಹಾಗೂ ಸೈಟ್ ಅಭಿಯಂತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌