ಶ್ರೀ ಸಿದ್ಧೇಶ್ವರ ಸಂಸ್ಥೆಯ ನೂತನ ಏಳು ಜನ ನಿರ್ದೇಶಕರಿಂದ ಅಧಿಕಾರ ಸ್ವೀಕಾರ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಂಸ್ಥೆಯ ನೂತನ ನಿರ್ದೇಶಕರಾಗಿ ಏಳು ಜನ ಅಧಿಕಾರ ಸ್ವೀಕರಿಸಿದ್ದಾರೆ. ದೇವಸ್ಥಾನ ಆವರಣದಲ್ಲಿರುವ ಡಾ. ಫ. ಗು. ಹಳಕಟ್ಟಿ ಸಭಾ ಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ವಿಶೇಷ ಸಭೆಯಲ್ಲಿ ಏಳು ಜನ ನೂತನ ನಿರ್ದೇಶಕರು ಅಧಿಕಾರ ಸ್ವೀಕರಿಸಿದರು. ಚಂದಪ್ಪ ಹುಂಡೇಕಾರ, ನಾಗಪ್ಪ ಗುಗ್ಗರಿ, ಸಾಯಿಬಣ್ಣ ಭೋವಿ, ಮಲಕಪ್ಪ ಗಾಣಿಗೇರ, ರಮೇಶ ಹಳ್ಳದ, ಯತ್ನಾಳ ಅವರ ಪುತ್ರ ರಾಮನಗೌಡ […]

ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ ತೆರೆದ ಹೃದಯ, ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ- ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಅತೀ ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಟ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಶುಕ್ರವಾರ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ತೆರೆದ ಹೃದಯ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ […]

ನ. 24, 25 ರಂದು ಭಾವಸಾರ ಕ್ಷತ್ರೀಯ ಸಾಂಸ್ಕೃತಿಕ ಭವನ ಉದ್ಘಾಟನೆ- ರಾಜೇಶ ದೇವಗಿರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ವಿಜಯಪುರ: ನವೆಂಬರ್ 24 ಮತ್ತು 25 ರಂದು ನಗರದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ನೂತನ ಸಾಂಸ್ಕೃತಿಕ ಭವನದ ಉದ್ಗಾಟನೆ ಸಮಾರಂಭ ನಡೆಯಲಿದೆ. ನಗರದಲ್ಲಿ ನಡೆದ ಸಮಾಜದ ವಿಶೇಷ ಮಹಾಸಭೆ ಅಧ್ಯಕ್ಷ ರಾಜೇಶ ದೇವಗಿರಿ ಅವರ ನೇತೃತ್ವದಲ್ಲಿ ನಡೆಯಿತು.  ಈ ವಿಶೇಷ ಸಾಮಾನ್ಯ ಸಭೆಯಲ್ಲಿ ನೂತನ ಸಾಂಸ್ಕೃತಿಕ ಭವನದ ಉದ್ಘಾಟನೆ ಸಮಾರಂಭದ ಉದ್ಘಾಟನೆ ಕುರಿತು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಯಿತು. ನ. 24 ಮತ್ತು 25 ರಂದು ವಿಜಯಪುರ ನಗರದ ಎಲ್ಲಾ ಭಾವಸಾರ ಕ್ಷತ್ರೀಯ ಸಮುದಾಯದವರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬೇಕು.  […]

ಪ್ರಾಣಿಗಳು ಕಚ್ಚಿದ ತಕ್ಷಣ ರೇಬೀಸ್ ಚುಚ್ಚುಮದ್ದು ಹಾಕಿಸಿಕೊಳ್ಳಬೇಕು- ಡಾ. ಮಂಜುನಾಥ ಕೋಟೆಣ್ಣವರ

ವಿಜಯಪುರ: ಪ್ರಾಣಿಗಳು ಕಚ್ಚಿದ ತಕ್ಷಣ ರೇಬೀಸ್ ಚುಚ್ಚುಮದ್ದು ಹಾಕಿಸಿಕೊಳ್ಳುವುದರಿಂದ ರೋಗವನ್ನು ತಡೆಗಟ್ಟಲು ಸಾಧ್ಯ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಜನರಲ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ. ತಿಕೊಟಾ ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿಶ್ವ ರೇಬೀಸ್ ದಿನದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಾಣಿಗಳು ಕಚ್ಚಿದಾಗ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳು, ಪಡೆಯಬೇಕಾದ ಚಿಕಿತ್ಸೆಗಳ ಕುರಿತು […]

ರಾಜ್ಯ ಸರಕಾರ ಹಿಂದೂ, ಲಿಂಗಾಯಿತ ವಿರೋಧಿ ನೀತಿ ಅನುಸರಿಸುತ್ತಿದೆ- ಶೆಟ್ಟರ, ಸವದಿಯಿಂದ ಬಿಜೆಪಿಗೆ ಹಿನ್ನೆಡೆಯಾಗಿಲ್ಲ- ಯತ್ನಾಳ

ವಿಜಯಪುರ: ರಾಜ್ಯದಲ್ಲಿ ಹಿಂದೂ ವಿರೋಧಿ ಮತ್ತು ಲಿಂಗಾಯಿತ ವಿರೋಧಿ ಸರಕಾರ ಅಧಿಕಾರಿದಲ್ಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನಲ್ಲಿ ಲಿಂಗಾಯಿತ ನಾಯಕರು ಮತ್ತು ಅಧಿಕಾರಿಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂದು ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆಗೆ ಯತ್ನಾಳ ಬೆಂಬಲ ವ್ಯಕ್ತಪಡಿಸಿದರು. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ.  ಆದರೆ ನಾನು […]