ಶ್ರೀ ಸಿದ್ಧೇಶ್ವರ ಸಂಸ್ಥೆಯ ನೂತನ ಏಳು ಜನ ನಿರ್ದೇಶಕರಿಂದ ಅಧಿಕಾರ ಸ್ವೀಕಾರ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಂಸ್ಥೆಯ ನೂತನ ನಿರ್ದೇಶಕರಾಗಿ ಏಳು ಜನ ಅಧಿಕಾರ ಸ್ವೀಕರಿಸಿದ್ದಾರೆ.

ದೇವಸ್ಥಾನ ಆವರಣದಲ್ಲಿರುವ ಡಾ. ಫ. ಗು. ಹಳಕಟ್ಟಿ ಸಭಾ ಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ವಿಶೇಷ ಸಭೆಯಲ್ಲಿ ಏಳು ಜನ ನೂತನ ನಿರ್ದೇಶಕರು ಅಧಿಕಾರ ಸ್ವೀಕರಿಸಿದರು.

ಚಂದಪ್ಪ ಹುಂಡೇಕಾರ, ನಾಗಪ್ಪ ಗುಗ್ಗರಿ, ಸಾಯಿಬಣ್ಣ ಭೋವಿ, ಮಲಕಪ್ಪ ಗಾಣಿಗೇರ, ರಮೇಶ ಹಳ್ಳದ, ಯತ್ನಾಳ ಅವರ ಪುತ್ರ ರಾಮನಗೌಡ ಪಾಟೀಲ ಯತ್ನಾಳ ಹಾಗೂ ಮಲ್ಲಿಕಾರ್ಜುನ ಹಕ್ಕಾಪಕ್ಕಿ ಅವರು ಶಿವಯೋಗಿ ಶ್ರೀ ಸಿದ್ದೇಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಈಚೆಗೆ ನಡೆದ ಸಿದ್ದೇಶ್ವರ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸ್ಥಳೀಯ ಆಡಳಿತ ಮಂಡಳಿಯ ನಿರ್ದೇಶಕರ ಸಂಖ್ಯೆಯನ್ನು 15 ರಿಂದ 21ಕ್ಕೆ ಹೆಚ್ಚಿಸಲು ಅಧ್ಯಕ್ಷ ಯತ್ನಾಳ ಅವರಿಗೆ ಸಂಪೂರ್ಣ ಅಧಿಕಾರ ನೀಡಿ ಎಲ್ಲ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದರು.  ಅಂದು ಕೈಗೊಂಡ ಠರಾವಿನಂತೆ ಏಳು ಜನ ಹೊಸ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

ವಿಜಯಪುರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ನೂತನ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ ಅವರನ್ನು ನಿರ್ದೇಶಕರು ಸನ್ಮಾನಿಸಿದರು

ಅಧಿಕಾರ ಸ್ವೀಕರ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶ್ರೀ ಸಿದ್ದೇಶ್ವರ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿದೆ.  ಧಾರ್ಮಿಕ, ಸಾಮಾಜಿಕ ಕಾರ್ಯಗಳ ಜೊತೆಗೆ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿಯೂ ಗಣನೀಯ ಸೇವೆ ಸಲ್ಲಿಸುತ್ತಿದೆ.  ಇದಕ್ಕೆಲ್ಲ ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ ಕಾರಣವಾಗಿದೆ.  ಎಲ್ಲ ನಿರ್ದೇಶಕರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಕ್ರಿಯವಾಗಿ ಶ್ರಮ ವಹಿಸಿದರೆ, ಸಂಸ್ಥೆ ಮತ್ತಷ್ಟು ಉತ್ತುಂಗಕ್ಕೆ ಏರಲಿದೆ ಎಂದು ಹೇಳಿದರು.

ಇದೇ ವೇಳೆ ನೂತನ ನಿರ್ದೇಶಕರನ್ನು ಸನ್ಮಾನಿಸಲಾಯಿತು.  ಅಧಿಕಾರ ಸ್ವೀಕರಿಸುವ ಮುಂಚೆ ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.  ಸಂಸ್ಥೆಯ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ಚೇರಮನ ಬಸಯ್ಯ ಹಿರೇಮಠ, ಗೌರವ ಕಾರ್ಯದರ್ಶಿ ಸದಾನಂದ ದೇಸಾಯಿ, ಜಂಟಿ ಕಾರ್ಯದರ್ಶಿ ಮಲ್ಲಿಕಾರ್ಜುನ ಸಜ್ಜನ, ಕೋಶಾಧ್ಯಕ್ಷ ಬಸವರಾಜ ಸುಗೂರ, ನಿರ್ದೇಶಕ ಶಿವಾನಂದ ನೀಲಾ, ನಿಂಗೊಂಡಪ್ಪ ಗೋಲಾಯಿ, ಮಡಿವಾಳಪ್ಪ ಕರಡಿ, ವಿಜಯಕುಮಾರ ಡೋಣಿ, ಬಸವರಾಜ ಗಣಿ, ಸಂಗನಗೌಡ ನಾಡಗೌಡ, ಸುಧೀರ ಚಿಂಚಲಿ, ಸದಾಶಿವ ಗುಡ್ಡೋಡಗಿ, ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಎಂ. ಪ್ಯಾಟಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌