ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜಯಪುರ ಕೆಕೆಆರ್ಟಿಸಿಗೆ ತೃತೀಯ ಸ್ಥಾನ

ವಿಜಯಪುರ: ಗುಜರಾತಿನ ಅಹಮದಾಬಾದಿನಲ್ಲಿ ಮೂರು ದಿನಗಳ ಕಾಲ ನಡೆದ ಅಂತರ ನಿಗಮದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ತೃತೀಯ ಸ್ಥಾನ ಪಡೆದುಕೊಂಡಿದೆ.  ಅಸೋಸಿಯೇಶನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಅಂಡರ್ ಟೆಕ್ಕಿಂಗ್ ಈ ಪಂದ್ಯಾವಳಿ ಆಯೋಜಿಸಿತ್ತು. 

ಈ ಪಂದ್ಯಾವಳಿಯಲ್ಲಿ ಪಾಲ್ಗೋಂಡಿದ್ದ ತಾಳಿಕೋಟೆ ಘಟಕದ ಅಮರೇಶ ಎಸ್. ಮೇಟಿ, ಬಸವನ ಬಾಗೇವಾಡಿ ಘಟಕದ ಎಸ್. ಆರ್. ಶೇಖ, ಐ. ಐ. ಐರೊಡಗಿ ಅವರ ಸಾಧನೆಯನ್ನು ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ಮೊಹ್ಮದ ಫೈಜ್, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಿದರು.

Leave a Reply

ಹೊಸ ಪೋಸ್ಟ್‌