ಬರ ಅನುದಾನ ಹೆಚ್ಚಿಗೆ ನೀಡಿ- ತಿಕೋಟಾ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ವರದಿ ಸಲ್ಲಿಸಿ- ಕೇಂದ್ರ ತಂಡಕ್ಕೆ ಸಚಿವ ಎಂ. ಬಿ. ಪಾಟೀಲ ಪರವಾಗಿ ಮನವಿ ಪತ್ರ ಸಲ್ಲಿಕೆ

ವಿಜಯಪುರ: ತೀವ್ರ ಬರ ಪೀಡಿತ ವಿಜಯಪುರ ಜಿಲ್ಲೆಗೆ ಹೆಚ್ಚಿನ ಅನುದಾನ ಒದಗಿಸುವ ನಿಟ್ಟಿನಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದಾರೆ. ಸಚಿವರು ಸಧ್ಯಕ್ಕೆ ವಿದೇಶ ಪ್ರವಾಸದಲ್ಲಿದ್ದು, ಅವರ ಸೂಚನೆಯಂತೆ ಸಚಿವರ ಸಾರ್ವಜನಿಕ‌ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ, ಸಚಿವರ ಕಚೇರಿಯ ಅಧಿಕಾರಿಗಳಾದ ಎಂ. ಎನ್. ಚೋರಗಸ್ತಿ ಮತ್ತು ದಶರಥ […]