ಎರಡು ತಿಂಗಳಲ್ಲಿ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಶಾಸಕ ಯತ್ನಾಳ ಸೂಚನೆ

ವಿಜಯಪುರ: ಎರಡು ತಿಂಗಳಲ್ಲಿ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಿ, ಫಲಾನುಭವಿಗಳು ವಾಸಿಸಲು ಅನುಕೂಲ ಮಾಡಿ ಕೊಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ನಗರ ಮತಕ್ಷೇತ್ರ ವ್ಯಾಪ್ತಿಯ ನಮೋ ನಗರದಲ್ಲಿ ನಿರ್ಮಾಣ ಆಗುತ್ತಿರುವ ಆಶ್ರಯ ಮನೆಗಳ ಕಾಮಗಾರಿಯನ್ನು ವೀಕ್ಷಿಸಿದ ಅವರು, ತ್ವರಿತಗತಿಯಲ್ಲಿ ಬಾಕಿ ಕಾಮಗಾರಿ ಮುಗಿಸುವ ಜೊತೆಗೆ ಗುಣಮಟ್ಟತೆ ಕಾಯ್ದುಕೊಳ್ಳಬೇಕು.  ಎರಡು ದಿನಗಳಿಗೊಮ್ಮೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ ಅವರಿಗೆ ಸೂಚನೆ ನೀಡಿದರು. […]