ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಜೆಡಿಎಸ್ ಮುಖಂಡರು- ಶ್ರೀ ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರದ ದರ್ಶನ ಪಡೆದ ನಾಯಕರು

ವಿಜಯಪುರ: ಕೋರ್ ಕಮಿಟಿ ಸಭೆಯ ಹಿನ್ನೆಲೆಯಲ್ಲಿ ಬಸವನಾಡು ವಿಜಯಪುರ ನಗರಕ್ಕೆ ಆಗಮಿಸಿದ್ದ ಜೆಡಿಎಸ್ ಮುಖಂಡರು ಜ್ಞಾನಯೋಗಾಶ್ರಮಕ್ಕೆ ತೆರಳಿ ವೇಂದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿಯವರ ಗದ್ದುಗೆ ಮತ್ತು ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಅವರ ಭಾವಚಿತ್ರದ ದರ್ಶನ ಪಡೆದರು.  ಈ ಸಂದರ್ಭದಲ್ಲಿ ಆಶ್ರಮಕ್ಕೆ ಆಗಮಿಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ, ಮಾಜಿ ಸಚಿವ ಬಂಡಪ್ಪ ಕಾಶೆಂಪೂರ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ, ನಾಡಗೌಡ, […]

ಭವಿಷ್ಯದಲ್ಲಿ ಕೃತಕ ಬುದ್ದಿಮತ್ತೆ ಸಂಶೋಧನೆಗಳಲ್ಲಿ ಪ್ರಾಬಲ್ಯ ಸಾಧಿಸಲಿದೆ- ಡಾ. ವೈ. ಎಂ. ಜಯರಾಜ

ವಿಜಯಪುರ: ಭವಿಷ್ಯದಲ್ಲಿ ಕೃತಕ ಬುದ್ದಿಮತ್ತೆ ಸಂಶೋಧನೆ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಫಾರ್ಮಸಿ ಕಾಲೇಜಿನಲ್ಲಿ ನಡೆದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಮಷೀನ್ ಲರ್ನಿಂಗ್ (ML) ಆ್ಯನ್ ಅಪ್ಲಿಕೇಶನ್ ಪ್ರಾಸ್ಪೆಕ್ಟಿವ್ ಇನ್ ಹೆಲ್ತಕೇರ್ ಆ್ಯಂಡ್ ಎಜುಕೇಶನ್ ಸೆಕ್ಟರ್ಸ್ ವಿಷಯ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ಕೃತಕ ಬುದ್ದಿಮತ್ತೆ […]

ಸಚಿವ ಎಂ. ಬಿ. ಪಾಟೀಲ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ 7 ಜನ ಕಾರ್ಪೋರೇಟರ್ ಗಳು- ವಿಜಯಪುರ ಮಹಾನಗರಪಾಲಿಕೆಯಲ್ಲಿ ಈಗ ಕೈಗೆ ಬಹುಮತ

ಬೆಂಗಳೂರು: ವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಬೆಂಗಳೂರಿನ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಮಹಾನಗರ ಪಾಲಿಕೆಯ ಪಕ್ಷೇತರ ಸದಸ್ಯರಾದ ಅಶೋಕ ನ್ಯಾಮಗೌಡ, ವಿಮಲಾ ರಫೀಕ್ ಕಾನೆ, ಅಲ್ತಾಫ್ ಇಟಗಿ, ಜೆಡಿಎಸ್ ಸದಸ್ಯೆ ಸುಮಿತ್ರಾ ರಾಜು ಜಾದವ, ಎಂಐಎಂಐಎಂ ನ ಕೈಸರ್ ಇನಾಮದಾರ ಮತ್ತು ಸೂಫಿಯಾ ವಾಟಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಾಲಿಕೆಯ ಮತ್ತೋರ್ವ ಸದಸ್ಯೆ ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ. ಆದರೆ, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ. ಒಟ್ಟು […]