ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಜೆಡಿಎಸ್ ಮುಖಂಡರು- ಶ್ರೀ ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರದ ದರ್ಶನ ಪಡೆದ ನಾಯಕರು

ವಿಜಯಪುರ: ಕೋರ್ ಕಮಿಟಿ ಸಭೆಯ ಹಿನ್ನೆಲೆಯಲ್ಲಿ ಬಸವನಾಡು ವಿಜಯಪುರ ನಗರಕ್ಕೆ ಆಗಮಿಸಿದ್ದ ಜೆಡಿಎಸ್ ಮುಖಂಡರು ಜ್ಞಾನಯೋಗಾಶ್ರಮಕ್ಕೆ ತೆರಳಿ ವೇಂದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿಯವರ ಗದ್ದುಗೆ ಮತ್ತು ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಅವರ ಭಾವಚಿತ್ರದ ದರ್ಶನ ಪಡೆದರು. 

ವಿಜಯಪುರ ಜ್ಞಾನಯೋಗಾಶ್ರಮಕ್ಕೆ ಜೆಡಿಎಸ್ ನಾನಾ ಮುಖಂಡರು ಭೇಟಿ ನೀಡಿದರು

ಈ ಸಂದರ್ಭದಲ್ಲಿ ಆಶ್ರಮಕ್ಕೆ ಆಗಮಿಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ, ಮಾಜಿ ಸಚಿವ ಬಂಡಪ್ಪ ಕಾಶೆಂಪೂರ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ, ನಾಡಗೌಡ, ವೈ. ಎಸ್. ವಿ. ದತ್ತಾ, ರೈತಪರ ಹೋರಾಟಗಾರ ಪಂಚಪ್ಪ ಕಲಬುರ್ಗಿ ಮುಂತಾದ ಮುಖಂಡರನ್ನು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಮಹಾಸ್ವಾಮಿಗಳು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ನಾನಾ ಸ್ವಾಮೀಜಿ ಮತ್ತು ಭಕ್ತರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌