ಅ. 20 ರಂದು ಬಿ.ಎಲ್.ಡಿ.ಇ ಡಿಮ್ಡ್ ವಿವಿ ಘಟಿಕೋತ್ಸವ- ಶಾಮನೂರು ಶಿವಶಂಕರಪ್ಪ ಅವರಿಗೆ ಗೌರವ ಡಾಕ್ಟರೇಡ್ ಪ್ರಧಾನ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಅ. 20ರಂದು ಶುಕ್ರವಾರ ಬೆ.11.30ಕ್ಕೆ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.  ಬಿ. ಎಲ್. ಡಿ. ಇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎಂ. ಬಿ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.  ಕುಲಪತಿ ಡಾ. ಆರ್. ಎಸ್. ಮುಧೋಳ ವರದಿ ವಾಚನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ […]

ಲಿಂಬೆಹಣ್ಣು, ಸಮುದ್ರದ ಮರಳಿನಿಂದ ತಯಾರಾಯ್ತು ನಾಡದೇವಿ- ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಗೆಲ್ಲಲಿ ಎಂದು ಶುಭ ಸಂದೇಶ- ಎಲ್ಲಿದೆ ಗೊತ್ತಾ?

ವಿಜಯಪುರ: ವಿಶ್ವಾದ್ಯಂತ ಈಗ ವಿಶ್ವಕಪ್ ಕ್ರಿಕೆಟ್ ಹವಾ ಜೋರಾಗಿದೆ.  ಭಾರತದಲ್ಲಿ ನಡೆಯುತ್ತಿರುವ ಈ ಪಂದ್ಯಾವಳಿ ಈಗ ಕ್ರಿಕೆಟ್ ಕ್ರೇಜ್ ಹೆಚ್ಚಿಸಿದೆ.  ಈ ಮಧ್ಯೆ ನಾಡಹಬ್ಬ ದಸರಾ ಸಂಭ್ರಮವೂ ಜೋರಾಗಿದೆ.  ಇದೆಲ್ಲವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಸವ ನಾಡು ವಿಜಯಪುರದಲ್ಲಿ ಓಡಿಶ್ಯಾದ ಖ್ಯಾತ ಕಲಾವಿದ ಮತ್ತು ಸಮುದ್ರದ ಮರಳಿನಿಂದ ಕಲಾಕೃತಿ ರಚಿಸುವ ಸುದರ್ಶನ ಪಟ್ನಾಯಕ್ ನಿರ್ಮಿಸಿರುವ ಮಾದರಿಯೊಂದು ಗಮನ ಸೆಳೆಯುತ್ತಿದೆ. ವಿಜಯಪುರ ನಗರದ ಶಹಾಪೇಟಿ ಗಲ್ಲಿಯ ಮುಖ್ಯ ರಸ್ತೆಯಲ್ಲಿ ಪ್ರತಿವರ್ಷ ನಾಡಹಬ್ಬ ದಸರಾ ಅಂಗವಾಗಿ ಪ್ರತಿಷ್ಠಾಪಿಸಲಾಗುವ ನಾಡದೇವಿ ಆಕರ್ಷಣೆಯ ಕೇಂದ್ರವಾಗುತ್ತಿದೆ.  […]

ಬೆಂಗಳೂರಿನಲ್ಲಿ ಐಟಿ ಧಾಳಿ ಪ್ರಕರಣ- ಗುತ್ತಿಗೆದಾರರ ಬಳಿ ಸಿಕ್ಕ ಹಣ ಬಿಜೆಪಿಯ 40% ಕಮಿಷನ್ ಹಣವಿರಬೇಕು- ಎಂ. ಬಿ. ಪಾಟೀಲ ವ್ಯಂಗ್ಯ

ವಿಜಯಪುರ: ಬೆಂಗಳೂರಿನಲ್ಲಿ ಗುತ್ತಿಗೆದಾರರ ಮೇಲೆ ನಡೆದ ಐಟಿ ಧಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರು 40% ಕಮಿಷನ್ ಸಂಗ್ರಹದ ಹಣವಿರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಣ ಕಾಂಗ್ರೆಸ್ ಪಂಚರಾಜ್ಯ ಚುನಾವಣೆಗೆ ಬಳಸಲು ಸಂಗ್ರಹಿಸಿ ಇಡಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದರು. ಐಟಿ ದಾಳಿಯಲ್ಲಿ ಸಿಕ್ಕ ಹಣ […]