ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ- ಸಂತೋಷ ಕುಂದರ್

ವಿಜಯಪುರ: ಬಾಲ್ಯ ವಿವಾಹ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು.  ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸಾರ್ವಜನಿಕ ಸಹಕಾರ ಅಗತ್ಯ ಎಂದು  ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಎಸ್. ಕುಂದರ ಹೇಳಿದ್ದಾರೆ.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು  ಅಭಿವೃದ್ಧಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಹಯೋಗದಲ್ಲಿ ನಗರದ ರುಡ್‌ಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಬೇಕು. ಯಾರೂ ಬಾಲ್ಯವಿವಾಹಕ್ಕೆ ಪ್ರೋತ್ಸಾಹ ನೀಡಬಾರದು. ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಇದನ್ನು ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ಅವರು ನೀಡಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ ಅವರು ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಅಧಿಕಾರಿಗಳಷ್ಟೇ ಅಲ್ಲದೇ ಸಾರ್ವಜನಿಕರು ಸಹ ಅರಿವು ಪಡೆದು ಮಾಹಿತಿ ನೀಡಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಜಿಲ್ಲಾ ನಿರೂಪಣಾಧಿಕಾರಿ ಸಾವಿತ್ರಿ ಗುಗ್ಗರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಸ್. ಸಿ. ಮ್ಯಾಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಾಕ್ಷಿ ಜಾನಕಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲ ಬಾಬು ಅವತಾಡೆ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಮುತ್ತಣ್ಣ ಧನಕರ, ಮೌನೇಶ ಪೋತದಾರ, ಗುರುರಾಜ ಇಟಗಿ, ಭಾರತಿ ಪಾಟೀಲ, ನಾನಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌