ಡಿ. 24 ರಂದು ವೃಕ್ಷೋತ್ಥಾನ ಹೆರಿಟೇಜ್ ರನ್-2023 ಆಯೋಜನೆ- ಲಾಂಛನ ಅನಾವಣ ಮಾಡಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಬರದ ನಾಡಿನಲ್ಲಿ ಅರಣ್ಯ ಕ್ರಾಂತಿ ಮಾಡುವ ಉದ್ದೇಶದಿಂದ ಮತ್ತು ಬಸವ ನಾಡಿನ ಪಾರಂಪರಿಕ ತಾಣಗಳ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶ ಹೊಂದಿರುವ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ಆಯೋಜಿಸಲಾಗಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023ರ ಲಾಂಛನ ಬಿಡುಗಡೆ ಸಮಾರಂಭ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.  ಬೃಹತ್ ಮತ್ತು ಮಧ್ಯಮ ಕೈಗಾರಿಗೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದರು. […]