ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ, ಬಸವೇಶ್ವರ ಜಿಲ್ಲೆ ನಾಮಕರಣ: ಅಭಿಪ್ರಾಯಗಳ ಆಹ್ವಾನ

ವಿಜಯಪುರ: ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಅಥವಾ ಬಸವೇಶ್ವರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಂಘ- ಸಂಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿರುವೆ.  ಈ ಹಿನ್ನಲೆಯಲ್ಲಿ  ವಿಶ್ವ ಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳ ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ.

ಈ ಪ್ರಕಟಣೆಯ 15 ದಿನಗಳೊಳಗಾಗಿ ವಿಶ್ವಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡುವ ಕುರಿತು ಸ್ಪಷ್ಟ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌