ನವರಾತ್ರಿ ಶುಭ ದಿನದಂದು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ಬಸವ ನಾಡಿನ ಪೋಷಕರು

ವಿಜಯಪುರ: ಹಿಂದೂ ಸಂಪ್ರದಾಯದಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲು ಶುಭ ದಿನಗಳಿಗಾಗಿ ಕಾಯುವ ಸಂಪ್ರದಾಯ ಹಿಂದಿನಂದಲೂ ಆಚರಣೆಯಿಂದ ಬಂದಿದೆ.  ತಮ್ಮ ಮಕ್ಕಳು ವಿದ್ಯಾವಂತರಾಗಬೇಕು.  ಬುದ್ದಿವಂತರಾಗಬೇಕು.  ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರಬೇಕು ಎಂದು ಆಶಿಸುವ ಪೋಷಕರು ಬಾಲ್ಯದಲ್ಲಿ ಅವರು ಅಕ್ಷರ ಕಲಿಯುವ ಅಥವಾ ಶಾಲೆಗೆ ಸೇರುವ ದಿನ ಶುಭವಾಗಿದ್ದರೆ ಅವರ ಭವಿಷ್ಯ ಉಜ್ವಲವಾಗಿರುತ್ತದೆ ಎಂಬ ನಂಬಿಕೆಯಿಂದ ಸ್ವಾಮೀಜಿಗಳು ಅಥವಾ ಅರ್ಚಕರು ಇಲ್ಲವೇ ಜ್ಯೋತಿಷಿಗಳು ಬಳಿ ಪಂಚಾಂಗ ಕೇಳುತ್ತಾರೆ.  ಅದೇ ರೀತಿ, ಇಂಥ ಶುಭ ದಿನಗಳಿಗಾಗಿಯೂ ಭಾರತೀಯ ಸಂಪ್ರದಾಯದಲ್ಲಿ ಕೇವಲ […]

ಕಿತ್ತೂರು ರಾಣಿ ಚೆನ್ನಮ್ಮ ಅವರ ತತ್ವಾದರ್ಶಗಳು ದಾರಿದೀಪವಾಗಿವೆ- ಮಹಾದೇವ ಮುರಗಿ

ವಿಜಯಪುರ: ನಾಡು- ನುಡಿಗಾಗಿ, ಈ ದೇಶಕ್ಕಾಗಿ ಸಮಾಜದ ಸುಧಾರಣೆಗಾಗಿ, ಸ್ವಾಭಿಮಾನಕ್ಕಾಗಿ ಧೀರೋದಾತ್ತೆತೆಯಿಂದ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮರಂತಹ ಮಹನೀಯರ ಆದರ್ಶ ವಿಚಾರಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ  ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಈ […]