ದಸರಾ ಅಂಗವಾಗಿ ಪಾರೇಖ ಬಡಾವಣೆಯ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ

ವಿಜಯಪುರ: ನಾಡಹಬ್ಬ ದಸರಾ ಮತ್ತು ವಿಜಯ ದಶಮಿ ಅಂಗವಾಗಿ ನಗರದ ಜ್ಞಾನಯೋಗಾಶ್ರಮದ ಹತ್ತಿರ ಇರುವ ಪಾರೇಖ ನಗರದಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.

ವಿಜಯಪುರ ನಗರದ ಪಾರೇಖ ನಗರದಲ್ಲಿ ದಸರಾ ಅಂಗವಾಗಿ ಬನ್ನಿ ಗಿಡದ ಪಲ್ಲಕ್ಕಿ ಮೆರವಣಿಗೆ ನಡೆಯಿತು

ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಾಲಯದ ಬನ್ನಿಗಿಡದ ಪಲ್ಲಕ್ಕಿಯನ್ನು ಹೊತ್ತ ಬಡಾವಣೆಯ ಹಿರಿಯರು ಮತ್ತು ಯುವಕರು ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.

ಹಿರಿಯರು, ಮಹಿಳೆಯರು ಮತ್ತು ಮಕ್ಕಳೂ ಕೂಡ ಪಲ್ಲಕ್ಕಿ ಉತ್ಸವದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡರು.

Leave a Reply

ಹೊಸ ಪೋಸ್ಟ್‌