ರೈತರಿಗೆ ದಸರಾ ಶುಭ ಸಂದರ್ಭ ಅಂಗವಾಗಿ ಒಂದು ಗಂಟೆ ಹೆಚ್ಚಿಗೆ ವಿದ್ಯುತ್- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ರೈತರಿಗೆ ಕೃಷಿಗಾಗಿ ಇನ್ನು ಮುಂದೆ ಒಂದು ಗಂಟೆ ಹೆಚ್ಚಿಗೆ ವಿದ್ಯುತ್ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಡಿಸಿ, ಜಿ. ಪಂ. ಸಿ ಇ ಓ, ಎಸ್ಪಿ ಹಾಗೂ ಹೆಸ್ಕಾಂ ಅಧಿಕಾರಿಗಳೊಂದಿ ಸಭೆ ನಡೆಸಿ ಅವರು ಮಾತನಾಡಿದರು. ಈವರೆಗೆ ರೈತರಿಗೆ ಐದು ಗಂಟೆ ತ್ರಿ- ಫೇಸ್ ವಿದ್ಯುತ್ ನೀಡಲಾಗುತ್ತಿದೆ.  ಇನ್ನು ಮುಂದೆ ದಸರಾ ಕೊಡುಗೆಯಾಗಿ ಒಂದು ಗಂಟೆ ಹೆಚ್ಚಿಗೆ […]

ದಸರಾ ಅಂಗವಾಗಿ ಸಾರ್ವಜನಿಕರೊಂದಿಗೆ ಶಾಸಕ ಯತ್ನಾಳ ಅವರಿಂದ ಬನ್ನಿ ವಿನಿಮಯ

ವಿಜಯಪುರ: ವಿಜಯ ದಶಮಿ ಅಂಗವಾಗಿ ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡರು. ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ ಶಾಸಕರು, ಫಲ್ಲಕ್ಕಿಯೊಂದಿಗೆ ನಗರದ ಎಪಿಎಂಸಿ ಹತ್ತಿರದ ನೀಲಕಂಠೇಶ್ವರ ದೇವಸ್ಥಾನದ ಬಳಿ ತೆರಳಿ ಬನ್ನಿ ಮುಡಿಯುವ ಕಾರ್ಯದಲ್ಲಿ ಭಾಗಿಯಾದರು. ನಂತರ ಮರಳಿ ಸಿದ್ದೇಶ್ವರ ದೇವಸ್ಥಾನ ಆವರಣಕ್ಕೆ ಆಗಮಿಸಿ, ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ರೈತರು, ಮುಖಂಡರು, […]

ದಸರಾ ಸಂಭ್ರಮ- ಸಾರ್ವಜನಿಕರು, ರೈತರು, ಮುಖಂಡರು, ಹಿತೈಷಿಗಳೊಂದಿಗೆ ಸಚಿವ ಎಂ. ಬಿ. ಪಾಟೀಲ ಬನ್ನಿ ವಿನಿಮಯ

ವಿಜಯಪುರ: ನಾಡಹಬ್ಬ ದಸರಾ ಅಂಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಿದರು. ಬೆಳಿಗ್ಗೆಯಿಂದಲೇ ಸಚಿವರ ಗೃಹ ಕಚೇರಿಗೆ ಆಗಮಿಸಿದ ಅಪಾರ ಸಂಖ್ಯೆಯಲ್ಲಿದ್ದ ರೈತರು, ಮುಖಂಡರು, ಸಾರ್ವಜನಿಕರು, ಸಚಿವರ ಅಭಿಮಾನಿಗಳು ಹಾಗೂ ಬೆಂಬಲಿಗರು ಸಚಿವರಿಗೆ ಬನ್ನಿ ನೀಡಿ ಶುಭ ಕೋರಿದರು.  ಇದಕ್ಕೆ ಪ್ರತಿಯಾಗಿ ಸಚಿವರೂ ಕೂಡ ಎಲ್ಲರಿಗೂ ಬನ್ನಿ ನೀಡಿ ಶುಭ ಕೋರಿದರು.  ವಿಜಯಪುರ, ಬಾಗಲಕೋಟೆ ಸೇರಿದಂತೆ ರಾಜ್ಯದ ನಾನಾ […]