ಉದ್ಯಮಿಯಾಗಿ ಹೆಚ್ಚೆಚ್ಚು ಉದ್ಯೋಗ ಸೃಷ್ಠಿಸಿ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು- ಎಚ್. ಕೆ. ಪಾಟೀಲ

ವಿಜಯಪುರ: ಉದ್ಯಮಿಯಾಗಿ ಹೆಚ್ಚೆಚ್ಚು ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ಕರೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿಯಲ್ಲಿ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸೇವಾ ಸಮಿತಿ ವತಿಯಿಂದ ನಿರ್ಮಿಸಲಾಗುವ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು ಸಮಾರಂಭ ಮತ್ತು ವಿಜಯಪುರ ನಗರದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಂಸ್ಥೆ ವತಿಯಿಂದ ನಿರ್ಮಿಸಲಾಗುತ್ತಿರುವ ಆಂಗ್ಲ ಮಾಧ್ಯಮ ಶಾಲೆಯ ಕಟ್ಡಡ ಮತ್ತು ವಿದ್ಯಾರ್ಥಿ ವಸತಿ ನಿಲಯದ […]

ಕಾವೇರಿ ನೀರು ಬಿಡುಗಡೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ- ಕರ್ನಾಟಕದಿಂದಲೇ ಬಿಜೆಪಿ ಹಿನ್ನೆಡೆ ಪ್ರಾರಂಭವಾಗಿದೆ- ಎಚ್. ಕೆ. ಪಾಟೀಲ

ವಿಜಯಪುರ: ಕಾವೇರಿ ಜಲವಿವಾದ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರಕ್ಕೆ ಕಾಜಳಿ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಅತ್ಯಂತ ನಿರ್ಲಕ್ಷ್ಯ ನೀತಿ, ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ಯಾವುದೇ ರೀತಿಯ ಕಳಕಳಿ, ಕಾಳಜಿ, ಆತುರ ಎಲ್ಲಿಯೂ ಕಾಣುತ್ತಿಲ್ಲ ಎಂದು ಆರೋಪಿಸಿದರು. ಕರ್ನಾಟಕದಲ್ಲಿ 215ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿವೆ ಎಂದು ರಾಜ್ಯ ಸರಕಾರ ಘೋಷಣೆ ಮಾಡಲಾಗಿದೆ.  ಕೇಂದ್ರ ಸರಕಾರದ […]

ಪತ್ರಕರ್ತರಾದ ರಮೇಶ, ಮಲ್ಲಿಕಾರ್ಜುನಮಠ, ಸೀತಾರಾಮ, ಕಂಪೂನವರ, ಸಾಧಕರಾದ ಎಸ್. ಡಿ. ಕುಮಾನಿ, ಎ. ಜೆ ಕುಲಕರ್ಣಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ವಿಜಯಪುರ: ಪತ್ರಕರ್ತರಾದ ಕೆ. ವಿ. ರಮೇಶ(ವಿಜಯವಾಣಿ ಸ್ಥಾನಿಕ ಸಂಪಾದಕ), ಅಲ್ಲಮಪ್ರಭು ಮಲ್ಲಿಕಾರ್ಜುನಮಠ(ತೆಂಕಣಗಾಳಿ ಸಂಪಾದಕ), ಸೀತಾರಾಮ ಕುಲಕರ್ಣಿ(ನವನಾಡ ಕರ್ನಾಟಕ ಸಂಪಾದಕ), ಷಡಾಕ್ಷರಿ ಕಂಪೂನವವರ(ಸುವರ್ಣ ನ್ಯೂಸ್), ಸಮಾಜ ಸೇವಕ ಎಸ್. ಡಿ. ಕುಮಾನಿ, ಇತಿಹಾಸ ತಜ್ಞ ಮತ್ತು ಸಂಶೋಧಕ ಎ. ಜೆ. ಕುಲಕರ್ಣಿ ಸೇರಿದಂತೆ 20 ಜನರನ್ನು ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಸಂಗಮೇಶ ಭೀಮಣ್ಣ ಕೆರೆಪ್ಪಗೋಳ, ಸಮಾಜ ಸೇವೆ-ಕನ್ನಡ ಸೇವೆ ಕ್ಷೇತ್ರದಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಬಾಳಿ ಹಾಗೂ ಸಿದ್ರಾಮಪ್ಪಾ ದುಂಡಪ್ಪಾ ಕುಮಾನಿ, […]

ಫ. ಗು. ಸಿದ್ದಾಪುರ, ಎ. ಎಂ. ಮದರಿ, ರಫೀ ಭಂಡಾರಿ ಸೇರಿ 68 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿಜಯಪುರ: ಮಕ್ಕಳ ಖ್ಯಾತ ಸಾಹಿತಿ ಪರಪ್ಪ ಗುರುಪಾದಪ್ಪ ಸಿದ್ದಾಪುರ, ನಾನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಅಪ್ಪಣ್ಣ ಮಾರುತಿ ಮದರಿ, ಹಾಗೂ ಉರ್ದು ಪತ್ರಕರ್ತ ರಫೀ ಭಂಡಾರಿ ಸೇರಿದಂತೆ ಒಟ್ಟು 68 ಜನರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ನಾನಾ ಕ್ಷೇತ್ರಗಳ ಸಾಧಕರಿಗೆ 2023ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ. ಡಾ. ಫ. ಗು. ಸಿದ್ದಾಪುರ(ಸಾಹಿತ್ಯ ಕ್ಷೇತ್ರ) ಡಾ. ಫ. ಗು. ಸಿದ್ದಾಪುರ ಅವರು ವಿಜಯಪುರ ಜಿಲ್ಲೆಯ […]

ವೃಕ್ಷೋಥಾನ ಹೆರಿಟೇಜ್ ರನ್- ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿ ಯಶಸ್ವಿಗೆ ಕೈ ಜೋಡಿಸಿ- ಡಿಸಿ ಟಿ. ಭೂಬಾಲನ್ ಕರೆ

ವಿಜಯಪುರ: ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ಡಿ.24ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವೃಕ್ಷೋತ್ಥಾನ್ ಹೆರಿಟೇಜ್ ರನ್-2023 ಆಯೋಜಿಸಲಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್- 2023ರ ಅಂಗವಾಗಿ ಜಿಲ್ಲೆಯ ನಾನಾ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ […]