ಹೆಸರು ಬದಲಾವಣೆ, ಜಿಲ್ಲೆ ವಿಭಜನೆ, ಮೆಟ್ರೋಗೆ ಹೊಸ ಹೆಸರು ಕುರಿತು ಸಚಿವ ಎಂ. ಬಿ. ಪಾಟೀಲ ಪ್ರತಿಕ್ರಿಯೆ

ವಿಜಯಪುರ: 12ನೇ ಶತಮಾನದ ಸಮಾನತೆಯ ಹರಿಕಾರ ಬಸವಣ್ಣನವರು ರಾಜ್ಯದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆ ವಿಚಾರದಿಂದ ಹಿಡಿದು ಹೊಸ ಹೆಸರಿಡುವ ಕುರಿತು ಕೇಳಲಾದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ನಮ್ಮ ಜಿಲ್ಲೆಯ ಹೆಸರು ಬಿಜಾಪುರದಿಂದ ವಿಜಯಪುರ ಎಂದು ಬದಲಾಯಿಸಲಾಗಿದೆ.  […]

ಸಿಎಂ ರನ್ನು ಕೆಳಗಿಳಿಸುವ ಹುನ್ನಾರ ನಡೆದಿದೆ- ಸರಕಾರ ತನ್ನ ತಪ್ಪಿನಿಂದ ಪತನವಾಗಲಿದೆ- ಶಾಸಕ ಯತ್ನಾಳ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆದಿದೆ.  ಸಿಎಂ ರನ್ನು ಕೆಳಗಿಳಿಸಲು ದೆಹಲಿಯಲ್ಲಿ ಯಾರಾರನ್ನು ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ ಹೆಸರು ಹೇಳದೇ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಕೆಳಗಿಳಿಸಲು ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎನ್ನುವ ಮಾಹಿತಿ ನಮಗೂ ಇದೆ ಎಂದು ಹೇಳಿದರು. ಚೆನ್ನಗಿರಿ ಶಾಸಕ ಡಿ. ಕೆ. ಶಿವಕುಮಾರ ಪರ 70 […]