ವೀರಯೋಧ ಕಾಶೀರಾಯ ಬಮ್ಮನಳ್ಳಿ ಸ್ಮರಣಾರ್ಥ ಸರ್ವಧರ್ಮ ಸಮ್ಮೇಳನ- ದೇಶಪ್ರೇಮ ಬೆಳೆಸಿಕೊಳ್ಳಲು ಗೋವಿಂದ ಕಾರಜೋಳ ಕರೆ

ವಿಜಯಪುರ: ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ಪ್ರತಿಯೊಬ್ಬ ಭಾರತೀಯರು ಯಾವುದೇ ಜಾತಿ-ಮತ ಪಂಥಗಳನ್ನು ಮೀರಿ ರಾಷ್ಟ್ರಪ್ರೇಮ ಬೆಳೆಸಿಕೊಂಡು, ಒಗ್ಗಟ್ಟಾಗಿ ಸುಭದ್ರ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕರೆ ನೀಡಿದರು.

ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಬಿಎಲ್‌ಡಿಇ ಸಂಸ್ಥೆಯ ನ್ಯೂ ಇಂಗ್ಲೀಷ್ ಹೈಸ್ಕೂಲ್ ಆವರಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತ್ಮಾತ್ಮರಾದ ವೀರಯೋಧ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಹವಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಯ ವೀರಯೋಧ ಕಾಶೀರಾಯನ ತ್ಯಾಗಕ್ಕೆ ಬೆಲೆ ಕಟ್ಟಲಾಗಲ್ಲ.  ಇಂಥ ವೀರನಿಗೆ ಜನ್ಮ ನೀಡಿದ ತಂದೆ, ತಾಯಿಯ ಕುರಿತು ಎಷ್ಟು ಕೊಂಡಾಡಿದರೂ ಕಡಿಮೆ.  ಪುಲ್ವಾಮಾ ದಾಳಿ ಸಂದರ್ಭದಲ್ಲಿ ಶತ್ರುವನ್ನು ಸದೆಬಡೆದು, ವೀರ ಮರಣ ಹೊಂದಿದ ಕಾಶೀರಾಯ ಸೂರ್ಯಚಂದ್ರ ಇರುವರೆಗೂ ಅಜರಾಮರಾಗಿ ಉಳಿಯಲಿದ್ದಾರೆ.  ಅವರ ತ್ಯಾಗದ ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸುವ-ನೆನಪಿಸುವ ನಿಟ್ಟಿನಲ್ಲಿ ಪುತ್ಥಳಿ ಅನಾವರಣ ಅತ್ಯಂತ ಸ್ತ್ಯುತ್ಯವಾಗಿದೆ.  ಕಾಶೀರಾಯ ಬೊಮ್ಮನಳ್ಳಿಯಂತೆ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು.  ದೇಶಕ್ಕಾಗಿ ನಾವು ಏನನ್ನಾದರೂ  ಕೊಡುಗೆ ನೀಡಬೇಕೆಂಬ ಬಾವನೆ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಉಕ್ಕಲಿಯಲ್ಲಿ ವೀರಯೋಧ, ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಹವeಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ, ಸರ್ವಧರ್ಮ ಸಮ್ಮೇಳನ ನಡೆಯಿತು

ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮಾತನಾಡಿ, ದೇಶ ಕಾಯುವ ಸೈನಿಕ ಯಾವುದೇ ಒಂದು ಜಾತಿ, ಮತ, ಪಂಥ, ಸಮಾಜದ ರಕ್ಷಣೆಗಾಗಿ ಗಡಿಯಲ್ಲಿ ನಿಲ್ಲುವುದಿಲ್ಲ.  ತನ್ನ ಮನೆ, ಸಂಬಂಧಿಕರನ್ನು ದೂರವಾಗಿ ಇಡೀ ದೇಶದ ಜನರು ನೆಮ್ಮದಿಯಿಂದ ಸುರಕ್ಷಿತವಾಗಿರಲಿ ಎಂಬ ಭಾವನೆಯಿಂದ ಗಡಿಯಲ್ಲಿ ಬಿಸಿಲು, ಮಳೆ ಲೆಕ್ಕಿಸದೇ ತನ್ನ ಪ್ರಾಣವನ್ನು ಮುಡುಪಾಗಿಟ್ಟು ದೇಶ ರಕ್ಷಣೆಗೆ ನಿಲ್ಲುತ್ತಾನೆ.  ಇಂಥ ಸೈನಿಕರ ಪ್ರತಿ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡೆಬೇಕು.  ಈ ನಿಟ್ಟಿನಲ್ಲಿ ವೀರಯೋಧ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣದಲ್ಲಿ ಉಕ್ಕಲಿ ಗ್ರಾಮದ ಪ್ರತಿಯೊಬ್ಬರು ಜಾತಿ, ಮತ ಪಂಥವನ್ನು ಮೀರಿ ದೇಶಾಭಿಮಾನದಿಂದ ಭಾಗವಹಿಸಿದ್ದು, ವಿಶ್ವಕ್ಕೆ ಮಾದರಿಯಾಗಿದೆ.  ಕಾಶೀರಾಯ ಬೊಮ್ಮನಳ್ಳಿ ಅವರಂತೆ ಪ್ರತಿ ಮನೆಯಿಂದ ಸೈನಿಕರಾಗಳಾಗುವ ಮೂಲಕ ದೇಶಾಭಿಮಾನ ಮೆರೆಯಬೇಕು ಎಂದು ಹೇಳಿದರು.

ಕೊಲ್ಹಾಪುರದ ಶ್ರೀ ಸಿದ್ದಗಿರಿ ಮಹಾಸಂಸ್ಥಾನ ಕನ್ನೇರಿ ಮಠದ ಕೃಷಿ ಋಷಿ ರಾಷ್ಟ್ರಸಂತ ಜಗದ್ಗುರು ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಉಕ್ಕಲಿ ಯರನಾಳ ಸಂಸ್ಥಾನ ವಿರಕ್ತಮಠದ ಡಾ. ಅಭಿನವ ಸಿದ್ಧರಾಮೇಶ್ವರ ಮಹಾಸ್ವಾಮಿಗಳು, ಜಾಲವಾದಿ- ನಂದವಾಡಗಿ ಆಳಂದ ಶ್ರೀ ಡಾ. ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಮನಗೂಳಿ ಹಿರೇಮಠದ ಶ್ರೀಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಹಜರತ್ ಸೈಯ್ಯದ್ ಷಾ ಹುಸೇನ್ ಪೀರ ಖಾದ್ರಿ ಚಿಸ್ತಿ ಮನಗೂಳಿ ಶರೀಫ್‌ ದ ಡಾ. ಫೈರೋಜ ಇನಾಂದಾರ, ಧರ್ಮಗುರುಗಳಾದ ಮೌಲಾನಾ ಶಕೀಲ್ ಅಹಮದ್ ಖಾಸ್ಮಿ ಅವರು ಆರ್ಶೀವಚನ ನೀಡಿ ಮಾತನಾಡಿದರು.  ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಿ.ಎಂ. ಗಣಕುಮಾರ ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಮುಖಂಡರಾದ ಉಮೇಶ ಕಾರಜೊಳ, ಉಕ್ಕಲಿ ಗ್ರಾಮದ ಗಣ್ಯರಾದ ಎನ್.  ಜಿ. ಸಿಂದಗಿ, ಬಾಳು ಮಸಳಿ, ಧರೆಪ್ಪ ಮಸಳಿ, ಶ್ರೀಮತಿ ದೊಡಮನಿ, ಪ್ರಕಾಶ ಪಟ್ಟಣದ, ಬಿ. ಜಿ. ಬಿರಾದಾರ, ಪ್ರಕಾಶ ಜುಮನಾಳ, ಪ್ರಭು ಹಂಡಿ, ಪ್ರವೀಣ ನಾದ, ಪ್ರಕಾಶ ಪಾಟೀಲ, ರಾಮುಗೌಡ ಇಂಡಿ, ಪ್ರವೀಣ ಕಾಮಗೊಂಡ, ಅಪ್ಪುಗೌಡ ಬಿರಾದಾರ, ಅಶೋಕ ಹಾವಿನಾಳ, ಹಾವೇರಿ ಸೇರಿದಂತೆ ಗ್ಗಾಮದ ಹಿರಿಯರು, ಯುವಕರು ಉಪಸ್ಥಿತರಿದ್ದರು.

ಪ್ರವೀಣ ಕಾಮಗೊಂಡ ಸ್ವಾಗತಿಸಿದರು.  ಶಿಕ್ಷಕ ಹಿರೇಮಠ, ಟೆಂಕಲಿ ಮತ್ತು ಮುಲ್ಲಾ ನಿರೂಪಿಸಿದರು. ಮಹೇಶ ಹಾವಿನಾಳ ವಂದಿಸಿದರು.

Leave a Reply

ಹೊಸ ಪೋಸ್ಟ್‌