ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿ ಡಿಪಿಆರ್ ತಯಾರಿಸಿ ಟೆಂಡರ್ ಪ್ರಕ್ರಿಯೆ ಮುಗಿಸಿ- ರಾಹುಲ್ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ  ಅವರು  ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿ 10,000 ಮೆಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು. 

ಸರಕಾರದಿಂದ ಮಂಜೂರಾದ 10,000 ಮೇಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ 8 ರಂದು NABCONS ಸಂಸ್ಥೆಯಿxದ ಎx.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, SONNE Infrastructure ಹಾಗೂ ವಿ. ಭರತ, ಯೋಜನಾ ಸಲಹೆಗಾರರು, NABCONS ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್, ಬೆಂಗಳೂರು ಮತ್ತು ವಿಜಯಪುರದ ತೋಟಗಾರಿಕೆ ಉಪ ನಿರ್ದೇಶಕರು  ಅವರನ್ನೊಳಗೊಂಡ  ತಂಡ ಸ್ಥಳ ಪರಿಶೀಲನೆ ನಡೆಸಿತು.

ರಾಹುಲ್ ಶಿಂಧೆ ಅವರು ಯೋಜನೆ ರೂಪುರೇಷಗಳನ್ನು ತಯಾರಿಸುವ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿರುವ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಆರ್ಥಿಕ ಕಾರ್ಯ ಸಾಧ್ಯತೆ ಹಾಗೂ ನಿರ್ವಹಣಾ ವೆಚ್ಚದ  ಸಾಧ್ಯತೆಯ ಬಗ್ಗೆ ಅಧ್ಯಯನ ಮಾಡಿ ರೈತರಿಗೆ ಕಡಿಮೆ ವೆಚ್ಚದಲ್ಲಿ  ಅಧಿಕ ಪ್ರಯೋಜನೆಗಳನ್ನು ಪಡೆಯಲು ಅನುಕೂಲವಾಗುವಂತೆ ಮತ್ತು ಭವಿಷ್ಯದಲ್ಲಿ ಶೀಥಲೀಕರಣದ ಕಟ್ಟಡ ವಿಸ್ತರಣೆಗೆ ಅವಕಾಶವಿರುವಂತೆ ಯೋಜನೆಯನ್ನು ರೂಪಿಸಲು ತಿಳಿಸಿದರು.

ಯೋಜನಾ ಸ್ಥಳದಲ್ಲಿ 800 ಕೆವಿ ಸಾಮರ್ಥ್ಯದ ವಿದ್ಯುತ್ ಸೌಲಭ್ಯವನ್ನು ಒದಗಿಸಲು ಇರುವ ಅವಕಾಶಗಳು ಹಾಗೂ ತಗಲುವ ವೆಚ್ಚಗಳ ಕುರಿತು ಯೋಜನಾ ಅಂದಾಜು  ತಯಾರಿಸಲು ಹೆಸ್ಕಾಂನ ಸಹಾಯಕ ಅಭಿಯಂತರು ಅವರಿಗೆ ಸೂಚನೆ ನೀಡಿದರು.

ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿದ ರಾಹುಲ ಶಿಂಧೆ 10000 ಮೇಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು 

ನಿಯೋಜಿತ ಸ್ಥಳಕ್ಕೆ ಅಥಣಿ ರಸ್ತೆಯಿಂದ ಮಹಿಳಾ ವಿಶ್ವ ವಿದ್ಯಾಲಯದ ಹಿಂಭಾಗದ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕೂಡುವ ರಸ್ತೆಯ ಮೂಲಕ ಪ್ರವೇಶ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಪಂಚಾಯತ್ ರಾಜ್ ಇಂಜಿನಿಯರಿAಗ ಇಲಾಖೆಯ ಸಹಾಯಕ ಅಭಿಯಂತರರಿಗೆ ಕ್ರಮ ವಹಿಸಲು ಸೂಚನೆ ನೀಡಿದರು.

ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರು ಇವರಿಗೆ ಸಂಬಂಧಿಸಿದ ಇಲಾಖೆಗಳಿಂದ ಅಗತ್ಯ ಅನುಮತಿ ಪಡೆದುಕೊಳ್ಳಲು ಹಾಗೂ ಅನುಷ್ಠಾನ ಸಂಸ್ಥೆಗೆ ಬೇಕಾದ ಎಲ್ಲ ಸಹಕಾರವನ್ನು ನೀಡಲು ಸೂಚನೆ ನೀಡಿದರು.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದಲ್ಲಿ ಸರಕಾರದಿಂದ ಮಂಜೂರಾದ 10,000 ಮೆಟ್ರಿಕ್ ಟನ್ ಸಾಮರ್ಥ್ಯದ ಅತ್ಯಾಧುನಿಕ ಶೈತ್ಯಾಗೃಹದ ಜೊತೆಗೆ ಕಲರ್ ಸಾರ್ಟಿಂಗ್ ಹಾಗೂ ಗ್ರೇಡಿಂಗ್ ಘಟಕ ನಿರ್ಮಾಣದ ಪ್ರಸ್ತಾವನೆ ಅನುಮೋದನೆಯಾಗಿದ್ದು, ಇದರ ಉದ್ದೇಶ ದ್ರಾಕ್ಷಿ ಹಣ್ಣು ಮತ್ತು ಒಣದ್ರಾಕ್ಷಿಗಳ ಸಂಗ್ರಹಣೆ, ಸಂಸ್ಕರಣೆ, ಸಾಗಣೆಯನ್ನು (ಕೋಲ್ಡ್ ಚೈನ್ ಸೌಲಭ್ಯದೊಂದಿಗೆ) ವೈಜ್ಞಾನಿಕವಾಗಿ ನಿರ್ವಹಿಸಲು ಮತ್ತು ಶೀಥಲೀಕರಿಸಿ ಸರಕು ಸಾಗಾಣಿಕೆ ಒದಗಿಸುವುದಾಗಿದೆ. ಇದರಿಂದ ಜಿಲ್ಲೆಯಲ್ಲಿನ ದ್ರಾಕ್ಷಿ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ನಬಾರ್ಡ್ ಸಂಸ್ಥೆಯ ಸಮಾಲೋಚಕರಾದ ಶರತ್ ವ್ಹಿ, ನಬಾರ್ಡ್ ಸಂಸ್ಥೆಯ ಮುಖ್ಯ ಎಂಜಿನಿಯರ್ ಪ್ರಭಾಕರ ಎಲ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ  ಬಸವರಾಜ ಐನಾಪುರ,  ವೈನ್ ಹಾಗೂ ಗ್ರೇಪ್ಸ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾದ  ಟಿ. ಸೋಮು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಿ. ಎಸ್ ಚವ್ಹಾಣ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುನಾಥ ಪಾಟೀಲ,  ನಾಗೇಂದ್ರ ಗುರುನಾಳ, ಸಚಿನ ಉಟಗಿ, ತೊರವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ರಾಜಶ್ರೀ ತುಂಗಳ, ಗ್ರಾಮ ಪಂಚಾಯತಿ ಪ್ರತಿನಿಧಿಗಳು ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌