ಅಂಧ ಅನಾಥ ವೃದ್ಧೆಯ ಬಾಳಿಗೆ ಬೆಳಕಾದ ಡಾ. ಪ್ರಭುಗೌಡ ಲಿಂಗದಳ್ಳಿ- ಅಜ್ಜಿಗೆ ದೀಪಾವಳಿ ಸಂದರ್ಭದಲ್ಲಿ ದೃಷ್ಠಿ ನೀಡಿದ ವೈದ್ಯ

ವಿಜಯಪುರ: ಕಣ್ಣು ಕಾಣದ ಹಿನ್ನೆಲೆಯಲ್ಲಿ ಸಂಬಂಧಿಕರು ಬಿಟ್ಟುಹೋದ ಅಜ್ಜಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ ದೃಷ್ಠಿ ನೀಡುವ ಮೂಲಕ ಬಸವನಾಡಿನ ಖ್ಯಾತ ನೇತ್ರ ತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿ ಅನಾಥ ವೃದ್ಧೆಯ ಜೀವದಲ್ಲಿ ದೀಪಾವಳಿ ಬೆಳಕು ಮೂಡಿಸಿದ್ದಾರೆ. ಇದೀಗ ಅಜ್ಜಿ ಚೇತರಿಸಿಕೊಂಡಿದ್ದು, ಆಕೆಯನ್ನು ತವರೂರಿಗೆ ಕಳುಹಿಸಿಕೊಟ್ಟಿರುವ ವೈದ್ಯರ ಮಾನವೀಯತೆ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.  ಅಷ್ಟೇ ಅಲ್ಲ, ಡಾ. ಪ್ರಭುಗೌಡ ಲಿಂಗದಳ್ಳಿ ಅವರು ತಮ್ಮ ಆಸ್ಪತ್ರೆಯ ಸಿಬ್ಬಂದಿಯಾದ ದತ್ತನಗೌಡ ಚೋಕಾವಿ ಅವರನ್ನು ಅಜ್ಜಿಯ ಜೊತೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗೆ […]

ನ. 19ರಂದು ಡಾ. ಬಿದರಿ ಚೈಲ್ಡ್ ಅಕಾಡೆಮಿ ಲೋಕಾರ್ಪಣೆ

ವಿಜಯಪುರ: ನಗರದ ಚಿಕ್ಕಮಕ್ಕಳ ಖ್ಯಾತ ವೈದ್ಯ ಡಾ. ಎಲ್. ಎಚ್. ಬಿದರಿಯವರ 40 ವರ್ಷಗಳ ವೈದ್ಯಕೀಯ ಸೇವೆಗೆ ಮತ್ತೋಂದು ಗರಿ ಸೇರ್ಪಡೆಯಾಗಲಿದ್ದು, ಎಚ್. ಟಿ. ಬಿದರಿ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಡಾ. ಬಿದರಿ ಚೈಲ್ಡ್ ಅಕಾಡೆಮಿ ಇದೇ ನ. 19 ರಂದು ರವಿವಾರ ಲೋಕಾರ್ಪಣೆಯಾಗಲಿದೆ. ಅಂದು ಸಂ. 5ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಅವರು ಪಾಲ್ಗೋಳ್ಳಲಿದ್ದಾರೆ.  ಅಲ್ಲದೇ, ಜಿಲ್ಲಾಧಿಕಾರಿ ಟಿ. […]