ಅನಿಮಿಯಾ ಮುಕ್ತ, ಪೌಷ್ಟಿಕ ಕರ್ನಾಟಕ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ- ಡಿಎಚ್ಓ ಬಸವರಾಜ ಹುಬ್ಬಳ್ಳಿ

ವಿಜಯಪುರ: ಅನಿಮಿಯಾ, ಅಪೌಷ್ಠಿಕತೆ ಹಾಗೂ ಮಕ್ಕಳ ದೈಹಿಕ ಬೆಳವಣಿಗೆ ಕುರಿತು ತಾಯಂದಿರು ಮತ್ತು ಪೋಷಕರು ಹೆಚ್ಚು ಜಾಗೃತರಾಗಿರಬೇಕು. ಅನಿಮಿಯಾ ಮುಕ್ತ, ಪೌಷ್ಟಿಕ ಕರ್ನಾಟಕ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಬಾಲಕರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ […]

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೆ ಯಾವುದೇ ತ್ಯಾಗಕ್ಕೂ ಸಿದ್ದ- ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಅನೇಕ ರೀತಿ ಹೋರಾಟ ಮಾಡಿದರೂ, ಯಾವುದೇ ಸರಕಾರ ಸರಿಯಾಗಿ ಸ್ಪಂಧಿಸಿಲ್ಲ.  ಬೇಡಿಕೆ ಈಡೇರುವವರೆಗೂ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ತಿಕೋಟಾ ತಾಲೂಕಿನ ಕನಮಡಿ ಬಳಿಯ ಸುಕ್ಷೇತ್ರ ಗಡಿಭಾಗದಲ್ಲಿರುವ ಶ್ರೀ ಧರಿದೇವರ ದೇವಸ್ಥಾನದ ಬಳಿಯ ಪ್ರೌಢಶಾಲೆಯ ಆವರಣದಲ್ಲಿ ಇಷ್ಟಲಿಂಗ ಪೂಜೆಯೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆ, ಚನ್ನಮ್ಮ ಜಯಂತಿ ವಿಜಯೋತ್ಸವ ಹಾಗೂ ಪಂಚಮಸಾಲಿ ಸಮಾಜದ ಬೃಹತ್ ಸಮಾವೇಶ ಉದ್ಘಾಟಿಸಿ ಅವರು […]

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಂ. ಬಿ. ಪಾಟೀಲರ ಪುತ್ರ ಬಸನಗೌಡ- ಶ್ಯಾಮನೂರು ಶಿವಶಂಕರಪ್ಪ ಮೊಮ್ಮಗಳು ಅಖಿಲಾ ಜೋಡಿ

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮತ್ತು ಆಶಾ ಎಂ. ಪಾಟೀಲ ಅವರ ಹಿರಿಯ ಪುತ್ರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಬಸನಗೌಡ ಪಾಟೀಲ ಅವರ ವಿವಾಹ ಹಿರಿಯ ಶಾಸಕ ಡಾ. ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳಾದ ಅಖಿಲಾ ಅವರೊಂದಿಗೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆಯಿತು. ಸಿದ್ದಗಂಗಾ ಸ್ವಾಮೀಜಿ, ಸುತ್ತೂರ ಸ್ವಾಮೀಜಿ, ಆದಿಚುಂಚನಗಿರಿ ಸ್ವಾಮೀಜಿ, ಬೇಲಿಮಠ ಸ್ವಾಮೀಜಿ, ಸೇರಿದಂತೆ ಪ್ರಮುಖ ಸ್ವಾಮೀಜಿಗಳ ಸಾನಿದ್ಯದಲ್ಲಿ ನಡೆದ […]