ಅಪಘಾತ ರಹಿತ ಚಾಲನೆ: ಮುಖ್ಯಮಂತ್ರಿಗಳಿಂದ ಬಸವ ನಾಡಿನ ಆರು ಚಾಲಕರಿಗೆ ಪದಕ

ವಿಜಯಪುರ: ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮದ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ  ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಆರು ಜನ ಚಾಲಕರು ಅಪಘಾತ ರಹಿತ ಚಾಲನೆಗೆ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಮೊಹಮ್ಮದ ಫೈಜ್ ಅವರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ನಿಗಮದ ಚಾಲಕರಾದ ಮುದ್ದೇಬಿಹಾಳ ಘಟಕದ ಸಿ. ಎಸ್. ಕಸಬೇಗೌಡರ, ಸಿಂದಗಿಯ ಪಿ. ಬಿ. ಕಾಂಬಳೆ, ವಿಜಯಪುರ 1ನೇ ಘಟಕದ ಎಸ್. ಎ. ಬಿರಾದಾರ, ಸಿಂದಗಿಯ ಎನ್. ಎಂ. ಮಾದರ, ತಾಳಿಕೋಟೆಯ ಕೆ. ಎಚ್. ಓಲೇಕಾರ ಹಾಗೂ ವಿಜಯಪುರ 1ನೇ ಘಟಕದ ಎಂ. ಆಯ್. ಸೋಲಾಪುರ ಅವರು ಸಿಎಂ ಚಿನ್ನದ ಪದಕ ಪಡೆದುಕೊಂಡಿದ್ದಾರೆ.  ಇವರ ಸಾಧನೆಗೆ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತು ಎಲ್ಲ ಅಧಿಕಾರಿ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌