ಆಯುಷ್ ಪಂಚಕರ್ಮ ಆಸ್ಪತ್ರೆಗೆ ಭೇಟಿ ಜಿ. ಪಂ. ಸಿಇಓ ಭೇಟಿ: ಮಾದರಿ ಪಂಚಕರ್ಮ ಘಟಕವನ್ನಾಗಿಸಲು ಶ್ರಮ ವಹಿಸಿ ಕಾರ್ಯ ನಿರ್ವಹಲು ಕರೆ

ವಿಜಯಪುರ: ನಮ್ಮ ವಿಜಯಪುರದ ಆಯುಷ್ ಪಂಚಕರ್ಮ ಘಟಕವು ಇತರ ಘಟಕಗಳಿಗೆ ಮಾದರಿಯಾಗಬೇಕು ಆ ನಿಟ್ಟಿನಲ್ಲಿ ಎಲ್ಲರೂ ಹೆಚ್ಚಿನ ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ವಿಜಯಪುರದ ಆಯುಷ್ ಹೈಟೆಕ್ ಪಂಚಕರ್ಮ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಆಯುಷ್ ಘಟಕ ಕಾರ್ಯನಿರ್ವಹಿಸುತ್ತಿರುವ ಕುರಿತು ಹಾಗೂ ಈ ಘಟಕದಲ್ಲಿ ದೊರೆಯು ಸೌಲಭ್ಯಗಳ ಕುರಿತು ವಿವಿಧ ಐಇಸಿ ಚಟುವಟಿಕೆಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಘಟಕದಲ್ಲಿ […]

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ: ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ಸಶಸ್ತ್ರ ಪಡೆಗಳ ಧ್ವಜ ಸದಾವಕಾಶ- ಡಿಸಿ ಟಿ. ಭೂಬಾಲನ್

ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಈ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಾಂಕೇತಿಕ ಧ್ವಜ ಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು,ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ದೇಶದ ಎಲ್ಲ ಭಾಗಗಳಲ್ಲಿ ಪ್ರತಿ ವರ್ಷ ಇದೇ ದಿನ ಡಿ.7ರಂದು […]