ವಿಜಯಪುರದಿಂದ ಕ್ಷೇತ್ರ ಮುರುಗೋಡಕ್ಕೆ ಪಾದಯಾತ್ರೆ ಹೊರಟ ಭಕ್ತರು

ವಿಜಯಪುರ: ಶ್ರೀ ಕ್ಷೇತ್ರ ಕೆಂಗೇರಿ ಮುರಗೋಡದಲ್ಲಿ ಡಿಸೆಂಬರ್ 18 ರಂದು ಶ್ರೀ ಚಿದಂಬರೇಶ್ವರ ಮಹಾಸ್ವಾಮಿಗಳ 264 ನೇ ಅವತಾರ ಜಯಂತೋತ್ಸವ ಅಂಗವಾಗಿ ಶ್ರೀ ಚಿದಂಬರೇಶ್ವರ ಕಲ್ಯಾಣ ರಥೋತ್ಸವ ವೈಭವದಿಂದ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುಕ್ಷೇತ್ರ ಮುರಗೋಡಕ್ಕೆ ವಿಜಯಪುರದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಚಿದಂಬರೇಶ್ವರ ಪಾದಯಾತ್ರೆ ಮಂಡಳಿಯಿಂದ ವಿಜಯಪುರ ನಗರದ ಚಿದಂಬರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ಜೋಶಿ ಸಂಕನಾಳ, ಸೇವೆಯಲ್ಲಿ ಪಾದಯಾತ್ರೆ ಸೇವೆ ದೊಡ್ಡದು.  […]

ಓಡಿಶಾ ಕಾಂಗ್ರೆಸ್ ಸಂಸದರ ಧೀರಜ ಸಾಹು ಬಂಧಿಸಲು ಆಗ್ರಹ- ವಿಜಯಪುರದಲ್ಲಿ ಬಿಜೆಪಿ ಪ್ರತಿಭಟನೆ

ವಿಜಯಪುರ: ಒಡಿಶಾದ ಕಾಂಗ್ರೆಸ್‌ ಸಂಸದ ಧೀರಜ ಸಾಹು ಅವರ ಮನೆಯಲ್ಲಿ ರೂ. 300 ಕೋ.  ಗೂ ಹೆಚ್ಚು ನಗದು ಹಣ ಪತ್ತೆಯಾಗಿದ್ದು, ಕೂಡಲೇ ಭ್ರಷ್ಟ ಸಂಸದರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಸಿದ್ದೇಶ್ಶ್ವರ ದೇವಾಸ್ಥಾನದ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಕಾಂಗ್ರೆಸ್‌ನ ರಾಜ್ಯಸಭೆ ಸದಸ್ಯ ಧೀರಜ ಸಾಹು ಅವರ ಮನೆಯಲ್ಲಿ ಕೋಟ್ಯಂತರ ನಗದು ಪತ್ತೆಯಾಗಿದೆ.  ಇದರಿಂದಾಗಿ ಕಾಂಗ್ರೆಸ್ ಪ್ರಜಾಪ್ರಭುತ್ವ ವಿರೋಧಿ, […]

ಅಂತಃಶಕ್ತಿ ಜಾಗೃತಗೊಳಿಸಿ ಜ್ಞಾನ ಸಂಪಾದಿಸಿ- ಎಸ್. ಎಸ್. ಬೀಳಗಿಪೀರ

ವಿಜಯಪುರ: ಪ್ರತಿಯೊಬ್ಬರೂ ತಮ್ಮಲ್ಲಿರುವ ಅಂತ:ಶಕ್ತಿಯನ್ನು ಜಾಗ್ರತಗೊಳಿಸಿ, ಜ್ಞಾನ ಸಂಪಾದಿಸಿ ಸಾರ್ಥಕ ಬದುಕು ಸಾಗಿಸಬೇಕು ಎಂದು ಕವಿ, ವಿಚಾರವಾದಿ ಡಾ. ಅಲ್ಲಮಾ ಇಕ್ಬಾಲ್ ಅವರ ಸಾಹಿತ್ಯದ ಸಾರವಾಗಿದೆ ಎಂದು ರಾಜ್ಯ ಸಹಕಾರ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಸ್. ಎಸ್. ಬೀಳಗಿಪೀರ ಹೇಳಿದ್ದಾರೆ.  ನಗರದ ಸಿಕ್ಯಾಬ್ ಸಂಸ್ಥೆಯ ಎ. ಆರ್. ಎಸ್ ಇನಾಮದಾರ ಮಹಿಳಾ ಮಹಾವಿದ್ಯಾಲಯದಲ್ಲಿ ಬಸವೇಶ್ವರ, ವಿವೇಕಾನಂದ, ಇಕ್ಬಾಲ್ ಹಾಗೂ ಅಂಬೇಡ್ಕರ ಪೀಠಗಳು ಹಾಗೂ ಕಾಲೇಜಿನ ಉರ್ದು ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ […]

ಡಿಸೆಂಬರ್ 14 ರಂದು ಭಗೀರಥ ಭಾರತ ಜನ ಕಲ್ಯಾಣ ಯಾತ್ರೆ ಆಗಮನ- ಜಕ್ಕಪ್ಪ ಯಡವೆ

ವಿಜಯಪುರ: ಡಿಸೆಂಬರ್ 9 ರಿಂದ ಭಾರತಾದ್ಯಂತ ಭಗೀರಥ ಭಾರತ ಜನ ಕಲ್ಯಾಣ ಯಾತ್ರೆ ಪ್ರಾರಂಭಗೊAಡಿದ್ದು, ಯಾತ್ರೆಯು ಡಿ. 14 ರಂದು ಬೆ. 10 ಗಂಟೆಗೆ ವಿಜಯಪುರ ನಗರಕ್ಕೆ ಆಗಮಿಸಲಿದೆ.  ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಭಗೀರಥ ವೃತ್ತದಿಂದ ಶಿಕಾರಖಾನೆಯ ವೆಂಕಟೇಶ್ವರ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಪ್ಪಾರ ಸೇವಾ ಸಂಘದ ಅಧ್ಯಕ್ಷ ಜಕ್ಕಪ್ಪ ಯಡವೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ನೇತೃತ್ವದಲ್ಲಿ […]