ಶಾಸಕ ಯತ್ನಾಳ ಜನ್ಮ ದಿನದ ಅಂಗವಾಗಿ ಅನಾಥ ಆಶ್ರಮ ಮಕ್ಕಳಿಗೆ ಅನ್ನ ಪ್ರಸಾದ ವ್ಯವಸ್ಥೆ

ವಿಜಯಪುರ: ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅವರ 61ನೇ ಜನ್ಮ ದಿನದ ಅಂಗವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ವಿಕ್ರಮ ಗಾಯಕವಾಡ ಅವರು ಬಸವನಗರದಲ್ಲಿರುವ ಅನಾಥಾಶ್ರಮದ ಮಕ್ಕಳಿಗೆ ಅನ್ನ ಪ್ರಸಾದ ವ್ಯವಸ್ಥೆ ಮಾಡಿದರು.

ನಂತರ ಮಾತನಾಡಿದ ಅವರು, ಅಭಿವೃದ್ಧಿ ಹರಿಕಾರರಾದ ಹೆಮ್ಮೆಯ ಶಾಸಕರ ಜನ್ಮದಿವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅನಾಥಾಶ್ರಮದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ.  ನಮ್ಮ ನಾಯಕರಿಗೆ ಉನ್ನತ ಹುದ್ದೆ ದೊರಕಿ, ನಾಡಿನ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಹೇಳಿದರು.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಜನ್ಮದಿನದ ಅಂಗವಾಗಿ ಅನಾಥಾಶ್ರಮದಲ್ಲಿ ಮಕ್ಕಳಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಯಿತು

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಬಾಬು ಶಿರಶ್ಯಾಡ, ಅಶೋಕ ಬೆಲ್ಲದ, ರಾಜಶೇಖರ ಭಜಂತ್ರಿ, ರಮೇಶ ಪಡಸಲಗಿ, ಶರಣು ಕಾಖಂಡಕಿ, ಬಸವರಾಜ ಗೊಳಸಂಗಿ, ಅಮಿತ್ ಗಡುಕರ, ನಾಗರಾಜ ಮುಳವಾಡ, ಕೃಷ್ಣಾ ರಾಠೋಡ, ಶ್ರೀಧರ ಮತ್ತಿತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌