ವಿಜಯಪುರ ಜಿಲ್ಲಾ ಪೊಲೀಸ್ ಪರೇಡ ಗ್ರೌಂಡನಲ್ಲಿ ಶ್ವಾನಗಳ ಪ್ರದರ್ಶನ- ಗಮನ ಸೆಳೆದ ಶುನಕಗಳು

ವಿಜಯಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪೊಲೀಸ್ ಪರೇಡ್ ಗ್ರೌಂಡನಲ್ಲಿ ಏರ್ಪಡಿಸಿದ ಸ್ವಾನ ಪ್ರದರ್ಶನಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಚಾಲನೆ ನೀಡಿದರು. ಈ ಪ್ರದರ್ಶನದಲ್ಲಿ ಸುಮಾರು 24 ತಳಿಯ ಶ್ವಾನಗಳು ಪಾಲ್ಗೊಂಡು ಸಾರ್ವಜನಿಕರ ಗಮನ ಸೆಳೆದವು.  ಪ್ರದರ್ಶನಕ್ಕೆ 250 ಶ್ವಾನಗಳ ಮಾಲೀಕರು ಪ್ರದರ್ಶನಕ್ಕೆ ನೋಂದಣಿ ಮಾಡಿಕೊಂಡು ಪಾಲ್ಗೊಂಡರು.  ಗ್ರೇಟ್ ಫೇನ್, ಬೀಗಲ್, ಬಾಕ್ಸರ್, ಪೂಡಲ್, […]

ಗಣಿತ ವಿಷಯ ಫೋನ್ ಇನ್ ಕಾರ್ಯಕ್ರಮ ಯಶಸ್ವಿ- ಸಮಸ್ಯೆಗಳಿಗೆ ವಿಷಯ ತಜ್ಞರಿಂದ ಪರಿಹಾರ ಕಂಡುಕೊAಡ ವಿದ್ಯಾರ್ಥಿಗಳು

ವಿಜಯಪುರ: ಜಿಲ್ಲೆಯ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗಾಗಿ ಗಣಿತ ವಿಷಯದ ಕುರಿತಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ನಡೆದ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್. ಎಚ್. ನಾಗೂರ ತಿಳಿಸಿದ್ದಾರೆ. ನಗರದ ಉರ್ದು ಶಿಕ್ಷಕರ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸಂಜೆ 6 ರಿಂದ ರಾತ್ರಿ 8 ಗಂಟೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳು, ವಿಷಯದ ಗೊಂದಲಗಳಿಗೆ ವಿಷಯ ತಜ್ಞ ಶಿಕ್ಷಕರಿಂದ […]

ಬ್ರಹ್ಮದೇವರಮಡು ಗ್ರಾಮದಲ್ಲಿ ಬಲಭೀಮೇಶ್ವರ ಕಾತಿ೯ಕೋತ್ಸವ ಸಂಭ್ರಮ

ವಿಜಯಪುರ: ಸಿಂದಗಿ ತಾಲೂಕಿನ ಸುಕ್ಷೇತ್ರ ಬ್ರಹ್ಮದೇವನಮಡು ಗ್ರಾಮದ ಆರಾಧ್ಶ ದೈವ ಶ್ರೀ ಬಲಭೀಮೇಶ್ವರ ದೇವರ ಚಟ್ಟಿ ಕಾತಿ೯ಕೋತ್ಸವ ವಿಜೃಂಭಣೆಯಿಂದ ನಡೆಯಿತು.  ಕಾತಿ೯ಕೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜೆ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು.  ದೇವಸ್ಥಾನವನ್ನು ನಾನಾ ಬಣ್ಣದ ವಿದ್ಶುತ್ ದೀಪಾಲಂಕಾರ ಮಾಡಲಾಗಿತ್ತು.  ತಳಿರು, ತೋರಣಗಳ ಶೃಂಗಾರ ಗಮನ ಸೆಳೆಯಿತು.  ಈ ಕಾರ್ಯಕ್ರಮದಲ್ಲಿ ನಡೆದ ನಾನಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಭಕ್ತಿ ಮೆರೆದರು. ರಾತ್ರಿ ಭಕ್ತರಿಗೆ ಭಜ್ಜಿ, ರೊಟ್ಟಿ ಪ್ರಸಾದ ವ್ಶವಸ್ಥೆ ಮಾಡಲಾಗಿತ್ತು.  ಇಡೀ […]