ಜ. 15ರೊಳಗೆ ಸೈಕ್ಲಿಂಗ್ ವೆಲೊಡ್ರಂ ಕಾಮಗಾರಿ ಪೂರ್ಣಗೊಳಿಸಿ: ಸಿಇಓ ರಾಹುಲ್ ಶಿಂಧೆ ಸೂಚನೆ

ವಿಜಯಪುರ: ವಿಜಯಪುರ ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿಯನ್ನು ಇದೇ ಜನವರಿ 15ರೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದ್ದಾರೆ.

ಸೈಕ್ಲಿಂಗ್ ವೆಲೋಡ್ರಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸೈಕ್ಲಿಂಗ ವೆಲೊಡ್ರೊಂ ಕಾಮಗಾರಿಯು ಆರಂಭವಾಗಿ ಬಹಳ ದಿನಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಈ ಭಾಗದ ಸೈಕ್ಲಿಸ್ಟ್ ಗಳಿಗೆ ತೊಂದರೆಯಾಗುತ್ತಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಥಮಾಧ್ಯತೆಯಲ್ಲಿ ಬಾಕಿ ಉಳಿದ ಕಾಮಗಾರಿಯನ್ನು ಕೈಗೊಂಡು ಜನೇವರಿ 15ರೊಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಕಾಮಗಾರಿಯ ಗುಣಮಟ್ಟದಲ್ಲಿ ಯಾವದೇ ರಾಜಿ ಮಾಡಿಕೊಳ್ಳದೇ ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ವಿಜಯಪುರ ನಗರದ ಭೂತನಾಳ ತಾಂಡಾ ಬಳಿ ನಿರ್ಮಿಸಲಾಗುತ್ತಿರುವ ಸೈಕ್ಲಿಂಗ್ ವೆಲೊಡ್ರಂ ಕಾಮಗಾರಿ ಸ್ಥಳಕ್ಕೆ ಜಿ. ಪಂ. ಸಿಇಓ ರಾಹುಲ ಶಿಂಧೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಈ ಸಂದರ್ಭದಲ್ಲಿ ಪಂಚಾಯಿತಿ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಎಕ್ಸಿಕ್ಯೂಟಿವ್ ಎಂಜಿನಿಯರ್ ಪಿ. ಎಚ್. ಚವ್ಹಾಣ, ಸಹಾಯಕ ಅಭಿಯಂತರ ಎ. ಸಿ. ಮ್ಯಾಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಣಕಾಲ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌