ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ತೊಂದರೆ ನಿವಾರಣೆಗೆ ಜಿಲ್ಲೆಯ 211 ಗ್ರಾ.ಪಂ.ಗಳಲ್ಲಿ ಕ್ಯಾಂಪ್ಗಳ ಆಯೋಜನೆ- ಸಿಇಓ ರಾಹುಲ್ ಶಿಂಧೆ

ವಿಜಯಪುರ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಗೆ ದಿನಾಂಕ:19-07-2023 ರಂದು ರಾಜ್ಯಾದ್ಯಂತ ಚಾಲನೆ ನೀಡಲಾಗಿದ್ದು, ಜಿಲ್ಲೆಯ ಕೆಲವು ಫಲಾನುಭವಿಗಳಿಗೆ ತಾಂತ್ರಿಕ ತೊಂದರೆಗಳಿಂದ ಖಾತೆಗಳಿಗೆ ಹಣ ಜಮಾ ಆಗದೇ ಇರುವುದರಿಂದ  ಸಮಸ್ಯೆ ನಿವಾರಣೆಗಾಗಿ ಡಿ.27 ರಿಂದ 29ರವರೆಗೆ ಜಿಲ್ಲೆಯ 211 ಗ್ರಾಮ ಪಂಚಾಯತ್‍ಗಳಲ್ಲಿ ಕ್ಯಾಂಪ್‍ಗಳನ್ನು ಆಯೋಜಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ 1999 ಫಲಾನುಭವಿಗಳ ಇ-ಕೆವೈಸಿ […]