ಸಿದ್ದೇಶ್ವರ ಸ್ವಾಮೀಜಿಗಳ ನೀತಿ, ಆದರ್ಶಗಳನ್ನು ಸರಕಾರ ಪಾಲಿಸಲಿದೆ-ನಾನು ಬಸವಾದಿ ಶರಣರ ಅನುಯಾಯಿ- ಸಿಎಂ ಸಿದ್ಧರಾಮಯ್ಯ

ವಿಜಯಪುರ: ನಾನು ಬಸವಾದಿ ಶರಣರ ಅನುಯಾಯಿ.  ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ನೀತಿ ಆದರ್ಶಗಳನ್ನು ನಾನು ಮತ್ತು ನಮ್ಮ ಸರಕಾರ ಪಾಲನೆ ಮಾಡಲಿದೆ ಎಂದು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಹೇಳಿದ್ದಾರೆ. ವಿಜಯಪುರ ನಗರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿ ಇಂದಿಗೆ ಒಂದು ವರ್ಷ ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಲಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನು ಬಸವಾದಿ ಶರಣರ ಅನುಯಾಯಿ.  ಅವರು ಜಾತಿ ಮತ್ತು ಧರ್ಮ ರಹಿತವಾದ ಸಮಾಜ ನಿರ್ಮಾಣ ಗುರಿ […]

ಶ್ರೀ ಸಿದ್ಧೇಶ್ವರ ಅಪ್ಪನವರಂಥ ಗುರು ಮತ್ತೊಬ್ಬರು ಸಿಗಲು ಸಾಧ್ಯವಿಲ್ಲ- ಸಂಸದ ರಮೇಶ ಜಿಗಜಿಣಗಿ ಭಾವುಕ ನುಡಿ

ವಿಜಯಪುರ: ಶ್ರೀ ಸಿದ್ದೇಶ್ವರ ಅಪನವರಂಥ ಗುರು ಮತ್ತೊಬ್ಬರು ಸಿಗಲು ಸಾಧ್ಯವಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಗುರುನಮನ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾನು ಸಮಾಜದ ಅತ್ಯಂತ ಸಣ್ಣ ವ್ಯಕ್ತಿ.  ಆದರೆ, ಶ್ರೀಗಳು ನನ್ನನ್ನು ಅತ್ಯಂತ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು.  ತಮ್ಮ ಪಕ್ಕದಲ್ಲಿಯೇ ಕೂಡಿಸಿಕೊಂಡು ಊಟ ಮಾಡುತ್ತಿದ್ದರು.  ಅವರಂಥ ಸಂತರನ್ನು ನನ್ನ ಇಡೀ ಜೀವನದಲ್ಲಿಯೇ ಕಂಡಿಲ್ಲ.  ವ್ಯಕ್ತಿತ್ವದಿಂದಲೇ ಅವರು ಜಗತ್ಪ್ರಸಿದ್ಧಿಯನ್ನು ಗಳಿಸಿದ್ದರು.  ಸ್ವಂತಕ್ಕೆ ಏನನ್ನು ಭಯಸದೆ ಸದಾ ಸಮಾಜಕ್ಕೆ […]